ಬ್ರೇಕಿಂಗ್ ನ್ಯೂಸ್
14-09-20 07:23 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 12: ಡ್ರಗ್ಸ್ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ ಆಗಬೇಕು. ಆದರೆ ರಾಜ್ಯ ಸರಕಾರ ಹಿಟ್ ಅಂಡ್ ರನ್ ಆಗುವಂತೆ ನಡೆದುಕೊಳ್ಳಬಾರದು. ಸರಕಾರದ ಬಳಿ ಸಾಕ್ಷಿಗಳಿದ್ದರೆ ತಪ್ಪಿತಸ್ಥರು ಯಾರಿದ್ದಾರೆ ಎಲ್ರಿಗೂ ಶಿಕ್ಷೆ ಆಗೋ ವರೆಗೆ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ.ಖಾದರ್, ಜಮೀರ್ ಅಹ್ಮದ್ ಶ್ರೀಲಂಕಾ ಹೋಗಿದ್ದನ್ನು ಒಪ್ಕೊಂಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಶ್ರೀಲಂಕಾಗೆ ಹೋಗಬಾರದು ಅಂತೇನಾದ್ರೂ ಇದೆಯಾ ? ಲಂಕಾಗೆ ಹೋಗಲು ವೀಸಾ ಕೊಟ್ಟವರು ಇವರೇ ಅಲ್ವಾ ? ಬಿಜೆಪಿಯವರದ್ದೇ ಕೇಂದ್ರ ಸರಕಾರ ಇದೆ. ಏನೇನು ಅಕ್ರಮ ಆಗಿದೆ ಪತ್ತೆಹಚ್ಚಿ ಶಿಕ್ಷೆ ವಿಧಿಸಿ... ಅದು ಬಿಟ್ಟು ತಮ್ಮ ವೈಫಲ್ಯ ಮುಚ್ಚಿಡಲು ಜನರ ಗಮನ ಬೇರೆಡೆಗೆ ಸೆಳೆಯುವ ಕೆಲಸ ಮಾಡಬಾರದು. ಶ್ರೀಲಂಕಾ, ಕ್ಯಾಸಿನೋ ಮತ್ತೊಂದು ಅಂತ ಕಾಲಹರಣ ಮಾಡಬಾರದು ಎನ್ನುವ ಮೂಲಕ ಪರೋಕ್ಷವಾಗಿ ಜಮೀರ್ ಪರ ಖಾದರ್ ಕೂಡ ಬ್ಯಾಟಿಂಗ್ ಮಾಡಿದ್ದಾರೆ.
ಅಲ್ಲದೆ, ರಾಜ್ಯ ಸರಕಾರ ಈಗ ರಾಜ್ಯದಲ್ಲಿ ನಾರ್ಕೊಟಿಕ್ ದಳವನ್ನು ಪ್ರಬಲಗೊಳಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಕೊಡುವ ಮಂದಿ ಸಾವಿರ ಇದ್ದಾರೆ. ಇವ್ರು ಬಂಧಿಸಿ ಬಿಡೋದ್ರಿಂದ ಏನೂ ಆಗಲ್ಲ. ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನಾರ್ಕೋಟಿಕ್ ಸೆಲ್ ಬಲಗೊಳಿಸಬೇಕು. ಆ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಚಳಿಗಾಲದ ವಿಧಾನಸಭೆ ಅಧಿವೇಶನದ ಬಗ್ಗೆ ಮಾತನಾಡಿದ ಯು.ಟಿ. ಖಾದರ್, ಎಂಟು ದಿನಗಳಿಗಷ್ಟೇ ವಿಧಾನಸಭೆ ಅಧಿವೇಶನ ಮಾಡಿದ್ದಾರೆ. ಇದರಲ್ಲಿ ಒಂದು ದಿನ ನಿಧನರಾದವರಿಗೆ ಶೋಕಾಚರಣೆ ಇರುತ್ತದೆ. ಇನ್ನಿರುವ ಏಳು ದಿನದಲ್ಲಿ ಏನ್ ಚರ್ಚೆ ಮಾಡೋಕೆ ಸಾಧ್ಯ. ಕೇವಲ ಕಾಟಾಚಾರಕ್ಕೆ ಮಾಡೋ ಬದಲು ಅಧಿವೇಶನವನ್ನು ಕನಿಷ್ಠ ಹತ್ತು ದಿನಗಳಿಗಾದ್ರೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm