ಬ್ರೇಕಿಂಗ್ ನ್ಯೂಸ್
16-12-21 02:08 pm HK Desk news ಕರಾವಳಿ
ಪುತ್ತೂರು, ಡಿ.16 : ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ, ಎಎಸ್ಪಿ ಶಿವಕುಮಾರ್ ಗುಣಾರೆ ಉಪ್ಪಿನಂಗಡಿಗೆ ಭೇಟಿ ನೀಡಿದ್ದು, ಅಹಿತಕರ ಘಟನೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಸ್ಪಿ ಋಷಿಕೇಶ್ ಸೋನವಾಣೆ, ಪೊಲೀಸರ ಮೇಲಿನ ದಾಳಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶಿಸ್ತು ಕ್ರಮ ಜರುಗಿಸುತ್ತೇವೆ. ಈಗಾಗ್ಲೇ ಆರೋಪಿಗಳು ಯಾರಿದ್ದಾರೆ ಅನ್ನುವುದನ್ನು ಗುರುತಿಸಿದ್ದು, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಮೊನ್ನೆಯ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ, ಮೂವರು ಪಿಎಫ್ಐ ಕಾರ್ಯಕರ್ತರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ, ಪಿಎಫ್ಐ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದು, ಒಳನುಗ್ಗಲು ಯತ್ನಿಸಿದ್ದಾರೆ. ಪೊಲೀಸರ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆನಂತರ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದರಿಂದಾಗಿ ಲಾಠಿಚಾರ್ಜ್ ನಡೆಸಿದ್ದು, ಈ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದು, ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಟ್ಟು ಉದ್ರಿಕ್ತರಾಗಬಾರದು. ಯಾವುದೇ ವಿಚಾರದಲ್ಲಿ ಸಂಶಯ, ಪ್ರಶ್ನೆಗಳಿದ್ದರೆ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕ ಮಾಡಬಹುದು. ಪೊಲೀಸರು ಜನರ ರಕ್ಷಣೆಗೆ ಇದ್ದಾರೆ ಅನ್ನುವ ಕಾಳಜಿ ಮತ್ತು ನಂಬಿಕೆಯನ್ನು ಇಟ್ಟುಕೊಳ್ಳಿ. ಯಾವುದೇ ಬಲವಂತದಿಂದ ಪೊಲೀಸರನ್ನು ಬಗ್ಗಿಸಬಹುದು ಎಂಬ ಹುಂಬತನ ಇಟ್ಟುಕೊಳ್ಳಬೇಡಿ. ಯಾವುದೇ ನಿರಪರಾಧಿಗಳನ್ನು ಪೊಲೀಸರು ಶಿಕ್ಷಿಸುವುದಿಲ್ಲ. ಈ ಬಗ್ಗೆ ನಾವು ನಿಗಾ ಇಟ್ಟಿದ್ದೇವೆ ಎಂದು ಎಸ್ಪಿ ಸೋನವಾಣೆ ಹೇಳಿದ್ದಾರೆ.
ಉಪ್ಪಿನಂಗಡಿಯ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ತರಿಸಲಾಗಿದೆ. ಮೂರು ರಾಜ್ಯಗಳ ಸಿಆರ್ ಪಿಎಫ್ ಪಡೆಯನ್ನು ಕರೆಸಲಾಗಿದ್ದು, ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆ ಮಾಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಪೊಲೀಸ್ ಇಲಾಖೆ ಸಜ್ಜಾಗಿದೆ ಎಂದು ಎಸ್ಪಿ ಋಷಿಕುಮಾರ್ ಸೋನವಾಣೆ ಹೇಳಿದ್ದಾರೆ.
ಪೊಲೀಸರ ಮೇಲೆ ಪಿಎಫ್ಐ ಕಾರ್ಯಕರ್ತರ ಹಲ್ಲೆಗೆ ವಿಹಿಂಪ ಖಂಡನೆ ; ಪಿಎಫ್ಐ ನಿಷೇಧಕ್ಕೆ ಒತ್ತಾಯ
Westran range inspector general of police (IGP), Devajyoti Ray, district superintendent of police (SP), Rishikesh Sonawane, along with additional SP, Shivakumar Gunare, visited Uppinangady on Wednesday December 15, and reviewed the situation. Speaking to media persons, the SP said that the investigation into the saber attack is going on at a brisk pace. He said that the actual accused in the case will be identified and legal steps will be taken.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 08:26 pm
HK News Desk
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
19-06-25 07:48 pm
Mangalore Correspondent
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm