ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.
ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm