ಬ್ರೇಕಿಂಗ್ ನ್ಯೂಸ್
17-12-21 10:31 pm HK Desk news ಕರಾವಳಿ
ಮಂಗಳೂರು, ಡಿ.17 : ಕಸ್ತೂರಿ ರಂಗನ್ ವರದಿಯನ್ನು ಕಾಂಗ್ರೆಸ್ ಸರಕಾರ ಇದ್ದಾಗ ಜಾರಿಗೊಳಿಸುವ ಬದಲು ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈಗ ಬಿಜೆಪಿ ಸರಕಾರವೂ ಕಸ್ತೂರಿ ರಂಗನ್ ವರದಿಯನ್ನು ರದ್ದುಪಡಿಸುವುದಾಗಿ ಹೇಳುತ್ತಿದೆ. ಆದರೆ, ಕೇಂದ್ರದಲ್ಲಿಯೂ ಬಿಜೆಪಿ ಸರಕಾರವೇ ಇದ್ದರೂ, ಅದನ್ನು ರದ್ದುಪಡಿಸಲು ಸಾಧ್ಯವಾಗಿಲ್ಲ ಯಾಕೆ ಎಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಕಾಂಗ್ರೆಸ್ ಸರಕಾರ ಇದ್ದಾಗ ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಗದ್ದಲ ಎಬ್ಬಿಸಿದವರು ಬಿಜೆಪಿ ಶಾಸಕರು. ಈಗ ಅವರೇ ಆಡಳಿತ ನಡೆಸುತ್ತಿದ್ದಾರೆ. ಈಗಲೂ ವಿರೋಧ ಇದೆಯೆಂದು ಹೇಳಿಕೊಂಡು ಬರುತ್ತಿದ್ದಾರೆ. ಇವರದೇ ಸರಕಾರ ಇರುವಾಗ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ತಿಳಿಹೇಳಬಹುದಲ್ಲ. ಈಗ ವರದಿಯ ವಿಚಾರ ಎನ್ ಜಿಟಿ ಕೋರ್ಟಿನಲ್ಲಿದೆ. ಮಹಾರಾಷ್ಟ್ರ ಮತ್ತು ಕೇರಳ ಸರಕಾರಗಳು ಕೂಡ ಈ ವರದಿ ಬಗ್ಗೆ ಆಕ್ಷೇಪಿಸಿ, ವರದಿ ನೀಡಿದ್ದಾರೆ. ಆದರೆ ಈ ಬಗ್ಗೆ ಕೇಂದ್ರ ಸರಕಾರ ನಿರ್ಧಾರಕ್ಕೆ ಬಂದಿಲ್ಲ ಎಂದು ಹೇಳಿದರು.

ಪರಿಸರ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ಕೊಟ್ಟಿದ್ದ ವರದಿಯನ್ನು ಆಕ್ಷೇಪಿಸಿ, ವಿಜ್ಞಾನಿ ಕಸ್ತೂರಿ ರಂಗನ್ ಮೂಲಕ ಹೊಸತಾಗಿ ವರದಿ ತಯಾರಿಸಲಾಗಿತ್ತು. ಅದನ್ನೂ ಯಾಕೆ ರದ್ದುಪಡಿಸಬೇಕು ಎನ್ನುತ್ತೀರಿ ಎಂಬ ಪ್ರಶ್ನೆಗೆ, ಜನರಿಗೆ ತೊಂದರೆಯಾಗುತ್ತದೆ ಎಂದು ವರದಿಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದ್ದು ಬಿಜೆಪಿಯವರು. ಜನರಿಗೆ ತೊಂದರೆಯಾದರೆ ನಮಗೂ ಬೇಡ ಎಂದು ರದ್ದುಪಡಿಸುವಂತೆ ಹೇಳಿದ್ದೆವು ಎಂದರು. ಹಾಗಾದರೆ ಪರಿಸರ ರಕ್ಷಣೆ ಯಾರಿಗೂ ಬೇಕಾಗಿಲ್ಲ ಎಂಬ ಪ್ರಶ್ನೆಗೆ, ನೀವು ಇದನ್ನು ಬಿಜೆಪಿಯವರಿಗೂ ಕೇಳಬೇಕು. ನಮ್ಮಲ್ಲಿ ಮಾತ್ರ ಅಲ್ಲ. ಅವರೇ ಈಗ ಆಡಳಿತದಲ್ಲಿದ್ದಾರೆ. ಹಿಂದೆ ಅವರೇ ಪ್ರತಿಭಟನೆ ನಡೆಸಿದ್ದು. ಹುಲಿ ಯೋಜನೆ ವಿಚಾರದಲ್ಲಿಯೂ ಗೂಬೆ ಕೂರಿಸಿ, ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದರು ಎಂದು ರೈ ಹೇಳಿದರು.
ವರದಿಗೆ ಅಧಿಕಾರಸ್ಥರ ವಿರೋಧ ಏಕೆ ?
ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಯಾವುದೇ ಬೃಹತ್ ಯೋಜನೆ ಮಾಡಬಾರದು, ಅಲ್ಲಿನ ಅರಣ್ಯ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಲಾಗಿತ್ತು. ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿ ಹರಡಿರುವ ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಅದಕ್ಕೆ ಹೊಂದಿಕೊಂಡಿರುವ ಗ್ರಾಮಗಳು, ಘಟ್ಟದಲ್ಲಿ ನೆಲೆಸಿರುವ ಜನರನ್ನು ಎಬ್ಬಿಸಿ, ಪರ್ಯಾಯ ವ್ಯವಸ್ಥೆ ಮಾಡುವಂತೆ ವರದಿಯಲ್ಲಿ ಹೇಳಲಾಗಿತ್ತು. ಅದಲ್ಲದೆ, ಅಲ್ಲಿ ಈಗಾಗಲೇ ಇರುವ ಹೋಮ್ ಸ್ಟೇ ಸೇರಿದಂತೆ ಯಾವುದೇ ರೀತಿಯ ಯೋಜನೆಗಳಿಗೂ ಆಸ್ಪದ ನೀಡದಂತೆ ವರದಿಯಲ್ಲಿ ಹೇಳಲಾಗಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸುವ ಬದಲು ವರದಿಯೇ ಅಗತ್ಯವಿಲ್ಲ ಎಂದು ರಾಜ್ಯ ಸರಕಾರ ಆಕ್ಷೇಪ ಸೂಚಿಸಿತ್ತು. ಜನರ ವಿರೋಧ ಇದೆಯೆಂದು ಹೇಳುವ ಮೂಲಕ ಎಸ್ಟೇಟ್ ಮಾಫಿಯಾ, ಹೋಮ್ ಸ್ಟೇ ಮಾಫಿಯಾ, ಬೃಹತ್ ಯೋಜನೆಗಳ ಪರ ನಿಂತಿತ್ತು.
Why kasturirangan report is not yet cancelled Questions Ramanath Rai during a press meet that was held at Congress office in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm