ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm