ಬ್ರೇಕಿಂಗ್ ನ್ಯೂಸ್
19-12-21 08:53 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.19: ಕುಡಿದ ಮತ್ತಿನಲ್ಲಿ ಕಾರು ಓಡಿಸಿಕೊಂಡು ಬಂದ ಯುವಕನೊಬ್ಬ ಬಸ್ ನಿಲ್ದಾಣಕ್ಕೆ ನುಗ್ಗಿಸಿದ ಘಟನೆ ನಗರದಲ್ಲಿ ನಡೆದಿದ್ದು ಅಲ್ಲಿದ್ದ ಮಹಿಳೆಯರು, ಯುವತಿಯರು ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಭಾನುವಾರ ಸಂಜೆ ಏಳು ಗಂಟೆ ಸುಮಾರಿಗೆ ನಗರದ ಶಿವಭಾಗ್ ಪೆಟ್ರೋಲ್ ಪಂಪ್ ಮುಂಭಾಗದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಕದ್ರಿ ಮಲ್ಲಿಕಟ್ಟೆ ಕಡೆಯಿಂದ ಕೆಂಪು ಡಸ್ಟರ್ ಕಾರು ವೇಗವಾಗಿ ಧಾವಿಸಿ ಬಂದಿದ್ದು ನಂತೂರು ಭಾಗದತ್ತ ತೆರಳುವಾಗ ರಸ್ತೆ ಬಿಟ್ಟು ಹೊರಕ್ಕೆ ಚಲಿಸಿದೆ. ಕಾರು ಧಾವಂತದಿಂದ ಎಡಭಾಗದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದ್ದು ಅಲ್ಲಿದ್ದ ಮಹಿಳೆಯರು ಕಾರನ್ನು ನೋಡಿ ದೂರಕ್ಕೆ ಓಡಿದ್ದಾರೆ. ಅದರಲ್ಲೂ 25 ವರ್ಷದ ಯುವತಿಯೊಬ್ಬಳು ಕಾರಿನಡಿಗೆ ಬೀಳುವುದನ್ನು ಮಹಿಳೆಯೊಬ್ಬರು ತನ್ನತ್ತ ಎಳೆದು ತಪ್ಪಿಸಿದ್ದಾರೆ.


ಕಾರು ರಸ್ತೆಯಿಂದ ಹೊರಕ್ಕೆ ಹರಿದು ಅಪಘಾತವಾಗಿದ್ದು ತಿಳಿಯುತ್ತಲೇ ಅದರಲ್ಲಿದ್ದ ವ್ಯಕ್ತಿ ಕಾರಿನಿಂದ ಇಳಿದು ಹೋಗಿದ್ದಾನೆ. ಬಳಿಕ ಜನರು ಜಮಾಯಿಸಿದ್ದು ಕದ್ರಿ ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕಾರು ಚಾಲಕ ಅಲ್ಲಿಂದ ನಾಪತ್ತೆಯಾಗಿದ್ದ.


ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಭಾರೀ ಅನಾಹುತ ಅಕಸ್ಮಾತ್ ತಪ್ಪಿ ಹೋಗಿದೆ. ಪೊಲೀಸರು ಕಾರಿನ ಚಾಲಕನನ್ನು ಪತ್ತೆ ಮಾಡುತ್ತಾರೋ, ಅಲ್ಲಿಗೇ ಬಿಟ್ಟು ಬಿಡುತ್ತಾರೋ ಗೊತ್ತಿಲ್ಲ. ಸ್ಥಳೀಯರೊಬ್ಬರು ಫೋಟೊ ತೆಗೆದು ಹೆಡ್ ಲೈನ್ ಕರ್ನಾಟಕದ ಗಮನಕ್ಕೆ ತಂದಿದ್ದಾರೆ. ಭಾನುವಾರ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಹೆಚ್ಚು ಜನ ಇರಲಿಲ್ಲ. ಇತರೇ ದಿನಗಳಾಗಿರುತ್ತಿದ್ದರೆ ಜನ ಸಂದಣಿ ಹೆಚ್ಚಿರುತ್ತಿತ್ತು. ಅಪಾಯ ಆಗುತ್ತಿತ್ತು ಎಂದು ತಿಳಿಸಿದ್ದಾರೆ.
Drunken car Driver rams Duster car into bus stand at Shivabagh Kadri in Mangalore, passengers escape uninjured. The car owner flee away from the spot after the accident. Kadri police rush to the spot and are investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am