ಬ್ರೇಕಿಂಗ್ ನ್ಯೂಸ್
19-12-21 08:53 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.19: ಕುಡಿದ ಮತ್ತಿನಲ್ಲಿ ಕಾರು ಓಡಿಸಿಕೊಂಡು ಬಂದ ಯುವಕನೊಬ್ಬ ಬಸ್ ನಿಲ್ದಾಣಕ್ಕೆ ನುಗ್ಗಿಸಿದ ಘಟನೆ ನಗರದಲ್ಲಿ ನಡೆದಿದ್ದು ಅಲ್ಲಿದ್ದ ಮಹಿಳೆಯರು, ಯುವತಿಯರು ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಭಾನುವಾರ ಸಂಜೆ ಏಳು ಗಂಟೆ ಸುಮಾರಿಗೆ ನಗರದ ಶಿವಭಾಗ್ ಪೆಟ್ರೋಲ್ ಪಂಪ್ ಮುಂಭಾಗದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಕದ್ರಿ ಮಲ್ಲಿಕಟ್ಟೆ ಕಡೆಯಿಂದ ಕೆಂಪು ಡಸ್ಟರ್ ಕಾರು ವೇಗವಾಗಿ ಧಾವಿಸಿ ಬಂದಿದ್ದು ನಂತೂರು ಭಾಗದತ್ತ ತೆರಳುವಾಗ ರಸ್ತೆ ಬಿಟ್ಟು ಹೊರಕ್ಕೆ ಚಲಿಸಿದೆ. ಕಾರು ಧಾವಂತದಿಂದ ಎಡಭಾಗದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದ್ದು ಅಲ್ಲಿದ್ದ ಮಹಿಳೆಯರು ಕಾರನ್ನು ನೋಡಿ ದೂರಕ್ಕೆ ಓಡಿದ್ದಾರೆ. ಅದರಲ್ಲೂ 25 ವರ್ಷದ ಯುವತಿಯೊಬ್ಬಳು ಕಾರಿನಡಿಗೆ ಬೀಳುವುದನ್ನು ಮಹಿಳೆಯೊಬ್ಬರು ತನ್ನತ್ತ ಎಳೆದು ತಪ್ಪಿಸಿದ್ದಾರೆ.


ಕಾರು ರಸ್ತೆಯಿಂದ ಹೊರಕ್ಕೆ ಹರಿದು ಅಪಘಾತವಾಗಿದ್ದು ತಿಳಿಯುತ್ತಲೇ ಅದರಲ್ಲಿದ್ದ ವ್ಯಕ್ತಿ ಕಾರಿನಿಂದ ಇಳಿದು ಹೋಗಿದ್ದಾನೆ. ಬಳಿಕ ಜನರು ಜಮಾಯಿಸಿದ್ದು ಕದ್ರಿ ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕಾರು ಚಾಲಕ ಅಲ್ಲಿಂದ ನಾಪತ್ತೆಯಾಗಿದ್ದ.


ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಭಾರೀ ಅನಾಹುತ ಅಕಸ್ಮಾತ್ ತಪ್ಪಿ ಹೋಗಿದೆ. ಪೊಲೀಸರು ಕಾರಿನ ಚಾಲಕನನ್ನು ಪತ್ತೆ ಮಾಡುತ್ತಾರೋ, ಅಲ್ಲಿಗೇ ಬಿಟ್ಟು ಬಿಡುತ್ತಾರೋ ಗೊತ್ತಿಲ್ಲ. ಸ್ಥಳೀಯರೊಬ್ಬರು ಫೋಟೊ ತೆಗೆದು ಹೆಡ್ ಲೈನ್ ಕರ್ನಾಟಕದ ಗಮನಕ್ಕೆ ತಂದಿದ್ದಾರೆ. ಭಾನುವಾರ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಹೆಚ್ಚು ಜನ ಇರಲಿಲ್ಲ. ಇತರೇ ದಿನಗಳಾಗಿರುತ್ತಿದ್ದರೆ ಜನ ಸಂದಣಿ ಹೆಚ್ಚಿರುತ್ತಿತ್ತು. ಅಪಾಯ ಆಗುತ್ತಿತ್ತು ಎಂದು ತಿಳಿಸಿದ್ದಾರೆ.
Drunken car Driver rams Duster car into bus stand at Shivabagh Kadri in Mangalore, passengers escape uninjured. The car owner flee away from the spot after the accident. Kadri police rush to the spot and are investigating the case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm