ಬ್ರೇಕಿಂಗ್ ನ್ಯೂಸ್
22-12-21 04:05 pm Mangalore Correspondent ಕರಾವಳಿ
ಉಳ್ಳಾಲ, ಡಿ.22 : ಕಳೆದ ಡಿಸೆಂಬರ್ 2 ರಂದು ಸಂಜೆ ರಾ.ಹೆ. 66ರ ಕೊಲ್ಯದಲ್ಲಿ ಪಾದಚಾರಿ ಯುವತಿಗೆ ಬೈಕ್ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್ (31)ಯಾನೆ ವಿಜಿ ಮೃತಪಟ್ಟ ಯುವಕ. ವಿಜೇಶ್ ಡಿ.2 ರಂದು ಕೊಲ್ಯ ಹೆದ್ದಾರಿಯಲ್ಲಿ ಬೈಕಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ವಿಜೇಶ್ ಮತ್ತು ಪಾದಚಾರಿ ಕೊಲ್ಯ ಸಾರಸ್ವತ ಕಾಲನಿ ದ್ವಾರಕಾ ನಗರ ನಿವಾಸಿ ಪಲ್ಲವಿ ಇಬ್ಬರೂ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ವಿಜೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಪಲ್ಲವಿ ಸ್ಥಿತಿಯೂ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.



ಮೃತ ವಿಜೇಶ್ ಅವಿವಾಹಿತನಾಗಿದ್ದು ಕಾರು ಟ್ಯಾಕ್ಸಿ ಚಲಾಯಿಸುವ ವೃತ್ತಿ ನಡೆಸುತ್ತಿದ್ದ. ಮೃತ ವಿಜೇಶ್ ತಾಯಿ, ತಂದೆ ಇಬ್ಬರು ಸಹೋದರರನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Bike accident in Ullal 31-year-old man dies in hospital after unsuccessful medical treatment. The deceased has been identified as Vijesh from Kumpala. His bike which lost control has rammed on a pedestrian who was a college student luckily she escaped with little injuries but Vijesh lost his life.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am