ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm