ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm