ಬ್ರೇಕಿಂಗ್ ನ್ಯೂಸ್
23-12-21 06:49 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಮಾಡೂರಿನ ನೀರಿನ ಟ್ಯಾಂಕಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕ ತೆರವುಗೊಳಿಸದಿದ್ದರೆ ಡಿ.27 ರಂದು ನಡೆಯುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಯನ್ನ ಬಹಿಷ್ಕರಿಸಲು ನಾಗರಿಕರು ನಿರ್ಧರಿಸಿದ್ದಾರೆ.
ಮಾಡೂರಿನ ನೀರಿನ ಟ್ಯಾಂಕಿ ಬಳಿ ಇಂದು ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ಪ್ರತಿಭಟನೆ ನಡೆಸಿದ್ದು ಕೋಟೆಕಾರು ಪಟ್ಟಣ ಪಂಚಾಯತ್ ಗೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣ ವ್ಯಾಪ್ತಿಯ 17 ವಾರ್ಡಿನ ತ್ಯಾಜ್ಯವನ್ನೆಲ್ಲಾ ಮಾಡೂರಿನ ನೀರಿನ ಟ್ಯಾಂಕ್ ಪ್ರದೇಶದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದು ಕೇವಲ ಹಸಿ ಕಸವನ್ನಷ್ಟೇ ಇಲ್ಲಿಂದ ವಿಲೇವಾರಿ ನಡೆಸುತ್ತಿದ್ದಾರೆ. ಉಳಿದ ಪ್ಲಾಸ್ಟಿಕ್ ತ್ಯಾಜ್ಯ, ಪ್ಯಾಂಪರ್ಸ್, ನ್ಯಾಪ್ ಕಿನ್ ಪ್ಯಾಡ್ ಗಳು ವಸತಿ ಪ್ರದೇಶದಲ್ಲೇ ಟನ್ ಗಟ್ಟಲೆ ರಾಶಿ ಬಿದ್ದು ಗಬ್ಬೆದ್ದರೂ ಪಟ್ಟಣ ಪಂಚಾಯತ್ ಆಡಳಿತ ಈ ಕಡೆ ಗಮನಹರಿಸಿಲ್ಲವೆಂದು ಪ್ರತಿಭಟನಾಕಾರರಾದ ವಾಸುದೇವ ನಾಯಕ್ ಹೇಳಿದ್ದಾರೆ.



ಅನೇಕ ಬಾರಿ ತ್ಯಾಜ್ಯ ಘಟಕವನ್ನ ಸ್ಥಳಾಂತರಿಸುವಂತೆ ಪಟ್ಟಣ ಪಂಚಾಯತಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಿಶೇಷವೆಂದರೆ ಈ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯಬಾರದು ಎಂದು ಪಟ್ಟಣ ಪಂಚಾಯತ್ ಎಚ್ಚರಿಕೆಯ ಫಲಕ ಹಾಕಿ ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದೇ ಆಡಳಿತವೇ ನಿಯಮ ಬಾಹಿರವಾಗಿ ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದೆ ಎಂದು ವಾಸುದೇವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಮನವಿಗೆ ಸ್ಪಂದಿಸದ ಸ್ಥಳೀಯಾಡಳಿತ ಇದ್ದೇನು ಪ್ರಯೋಜನವೆಂದು ಇದೇ ಡಿ.27 ರಂದು ನಡೆಯಲಿರುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ನಿರ್ಧರಿಸಿದ್ದಾರೆ.


ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯೆ ಸುರೇಖ ಚಂದ್ರಹಾಸ್, ಸ್ಥಳೀಯರಾದ ರೇಣುಕಾ ಶೆಟ್ಟಿ, ಪೂವಮ್ಮ , ಚಂದ್ರಿಕಾ ರೈ, ಅರುಣ್ ಡಿಸೋಜ, ರವಿಶಂಕರ್ ಕಿಣಿ, ರಮಾನಂದ, ಮೋಹನ್, ಸತೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಇದ್ದರು.
Madur residents oppose panchayat election after being fed up with tons of garbage in residential area.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm