ಬ್ರೇಕಿಂಗ್ ನ್ಯೂಸ್
23-12-21 06:49 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಮಾಡೂರಿನ ನೀರಿನ ಟ್ಯಾಂಕಿ ಬಳಿಯ ತ್ಯಾಜ್ಯ ವಿಲೇವಾರಿ ಘಟಕ ತೆರವುಗೊಳಿಸದಿದ್ದರೆ ಡಿ.27 ರಂದು ನಡೆಯುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆಯನ್ನ ಬಹಿಷ್ಕರಿಸಲು ನಾಗರಿಕರು ನಿರ್ಧರಿಸಿದ್ದಾರೆ.
ಮಾಡೂರಿನ ನೀರಿನ ಟ್ಯಾಂಕಿ ಬಳಿ ಇಂದು ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ಪ್ರತಿಭಟನೆ ನಡೆಸಿದ್ದು ಕೋಟೆಕಾರು ಪಟ್ಟಣ ಪಂಚಾಯತ್ ಗೆ ಬಿಸಿ ಮುಟ್ಟಿಸಿದ್ದಾರೆ. ಪಟ್ಟಣ ವ್ಯಾಪ್ತಿಯ 17 ವಾರ್ಡಿನ ತ್ಯಾಜ್ಯವನ್ನೆಲ್ಲಾ ಮಾಡೂರಿನ ನೀರಿನ ಟ್ಯಾಂಕ್ ಪ್ರದೇಶದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದು ಕೇವಲ ಹಸಿ ಕಸವನ್ನಷ್ಟೇ ಇಲ್ಲಿಂದ ವಿಲೇವಾರಿ ನಡೆಸುತ್ತಿದ್ದಾರೆ. ಉಳಿದ ಪ್ಲಾಸ್ಟಿಕ್ ತ್ಯಾಜ್ಯ, ಪ್ಯಾಂಪರ್ಸ್, ನ್ಯಾಪ್ ಕಿನ್ ಪ್ಯಾಡ್ ಗಳು ವಸತಿ ಪ್ರದೇಶದಲ್ಲೇ ಟನ್ ಗಟ್ಟಲೆ ರಾಶಿ ಬಿದ್ದು ಗಬ್ಬೆದ್ದರೂ ಪಟ್ಟಣ ಪಂಚಾಯತ್ ಆಡಳಿತ ಈ ಕಡೆ ಗಮನಹರಿಸಿಲ್ಲವೆಂದು ಪ್ರತಿಭಟನಾಕಾರರಾದ ವಾಸುದೇವ ನಾಯಕ್ ಹೇಳಿದ್ದಾರೆ.



ಅನೇಕ ಬಾರಿ ತ್ಯಾಜ್ಯ ಘಟಕವನ್ನ ಸ್ಥಳಾಂತರಿಸುವಂತೆ ಪಟ್ಟಣ ಪಂಚಾಯತಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವಿಶೇಷವೆಂದರೆ ಈ ಪ್ರದೇಶದಲ್ಲಿ ಸಾರ್ವಜನಿಕರು ಕಸ ಎಸೆಯಬಾರದು ಎಂದು ಪಟ್ಟಣ ಪಂಚಾಯತ್ ಎಚ್ಚರಿಕೆಯ ಫಲಕ ಹಾಕಿ ಸಿಸಿ ಕ್ಯಾಮೆರಾ ಅಳವಡಿಸಿದ್ದು ಅದೇ ಆಡಳಿತವೇ ನಿಯಮ ಬಾಹಿರವಾಗಿ ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದೆ ಎಂದು ವಾಸುದೇವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಮನವಿಗೆ ಸ್ಪಂದಿಸದ ಸ್ಥಳೀಯಾಡಳಿತ ಇದ್ದೇನು ಪ್ರಯೋಜನವೆಂದು ಇದೇ ಡಿ.27 ರಂದು ನಡೆಯಲಿರುವ ಕೋಟೆಕಾರು ಪಟ್ಟಣ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ಸ್ಥಳೀಯ ನಾಲ್ಕು ವಾರ್ಡಿನ ನಾಗರಿಕರು ನಿರ್ಧರಿಸಿದ್ದಾರೆ.


ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯೆ ಸುರೇಖ ಚಂದ್ರಹಾಸ್, ಸ್ಥಳೀಯರಾದ ರೇಣುಕಾ ಶೆಟ್ಟಿ, ಪೂವಮ್ಮ , ಚಂದ್ರಿಕಾ ರೈ, ಅರುಣ್ ಡಿಸೋಜ, ರವಿಶಂಕರ್ ಕಿಣಿ, ರಮಾನಂದ, ಮೋಹನ್, ಸತೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಇದ್ದರು.
Madur residents oppose panchayat election after being fed up with tons of garbage in residential area.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm