ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm