ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm