ಬ್ರೇಕಿಂಗ್ ನ್ಯೂಸ್
            
                        15-09-20 04:11 pm Mangalore Correspondent ಕರಾವಳಿ
            ಮಂಗಳೂರು, ಸೆಪ್ಟೆಂಬರ್ 15: ಅದು ಮಾಜಿ ಮುಖ್ಯಮಂತ್ರಿ ಒಬ್ಬರ ತವರೂರು. ಮೇಲಾಗಿ ಆ ಕ್ಷೇತ್ರದ ಶಾಸಕರದ್ದೇ ಊರು. ಅಲ್ಲಿನ ಮಂದಿ ಸಚಿವರು, ಸಂಸದರಾಗಿದ್ದಾರೆ. ಅಲ್ಲಿನ ಮಂದಿ ರಾಜ್ಯದ ಉನ್ನತ ಅಧಿಕಾರದ ಹುದ್ದೆಗಳನ್ನೂ ಪಡೆದಿದ್ದಾರೆ. ಈಗಿನ ಶಾಸಕರಿಗಂತೂ ಈ ಗ್ರಾಮವೇ ಹುಟ್ಟೂರು. ಇದೆಲ್ಲ ಹೆಗ್ಗಳಿಕೆ ಇದ್ದರೇನು ಬಂತು, ಕುಗ್ರಾಮದ ಜನರ ಬಹುಕಾಲದ ಬೇಡಿಕೆ ಮಾತ್ರ ಈಡೇರಲೇ ಇಲ್ಲ. 40 ವರ್ಷಗಳಿಂದ ಜನರು ಕೂಗು ಹಾಕಿದ್ದೇ ಬಂತು. ಈ ಬಾರಿ ಮಾತ್ರ ರೊಚ್ಚಿಗೆದ್ದಿರುವ ಅಲ್ಲಿನ ಜನ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.
ಅದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹಿರೇಬಂಡಾಡಿ ಸಮೀಪದ ಅಗರಿ ಎಂಬ ಕುಗ್ರಾಮ. ಅಲ್ಲಿ 12 ದಲಿತ ಕುಟುಂಬಗಳು ವಾಸ್ತವ್ಯವಿದ್ದರೆ, 25ಕ್ಕೂ ಹೆಚ್ಚು ಇತರ ಕುಟುಂಬಗಳಿವೆ. ಉಪ್ಪಿನಂಗಡಿ - ಕಡಬ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸಲು ಇಲ್ಲಿನ ಜನ ಕಿರು ಹೊಳೆ ಒಂದನ್ನು ದಾಟಿ ಹೋಗಬೇಕು. ಮಳೆಗಾಲದಲ್ಲಿ ದ್ವೀಪದಂತಾಗುವ ಈ ಭಾಗದ ಜನರು ಒಂದು ಸೇತುವೆಗಾಗಿ ಪಡಬಾರದ ಕಷ್ಟ ಅನುಭವಿಸಿದ್ದಾರೆ. ಸೇತುವೆಗಾಗಿ ಇಲ್ಲಿನ ಜನ ಕಳೆದ ನಾಲ್ಕು ದಶಕಗಳಿಂದ ಮನವಿ ನೀಡುತ್ತಲೇ ಇದ್ದಾರೆ. ಆದರೆ ಯಾವ ಅಧಿಕಾರಿಗಳೂ, ಜನಪ್ರತಿನಿಧಿಗಳು ಈ ಜನತೆಯ ಕೂಗಿಗೆ ಓಗೊಟ್ಟಿಲ್ಲ.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಪುತ್ತೂರಿನ ಶಾಸಕರಿದ್ದಾಗ ಅಗರಿ ದಲಿತ ಕಾಲೊನಿ ಸಂಪರ್ಕಿಸುವ ರಸ್ತೆಗೆ ಸೇತುವೆ ನಿರ್ಮಾಣ ಮಾಡುವಂತೆ ಈ ಭಾಗದ ಜನ ಮನವಿ ನೀಡಲು ಆರಂಭಿಸಿದ್ದರು. ನಂತರ ಶಕುಂತಳಾ ಶೆಟ್ಟಿ, ಮಲ್ಲಿಕಾ ಪ್ರಸಾದ್ ಶಾಸಕರಾದಾಗಲೂ ಮನವಿ ನೀಡಲಾಗಿತ್ತು. ಇದೀಗ ಇದೇ ಗ್ರಾಮದ ನಿವಾಸಿ ಸಂಜೀವ ಮಠಂದೂರು ಪುತ್ತೂರಿನಲ್ಲಿ ಶಾಸಕರಾಗಿದ್ದಾರೆ. ಅವರಿಗೂ ಎರಡು ಬಾರಿ ಇಲ್ಲಿನ ಜನತೆ ಮನವಿ ಮಾಡಿದ್ದಾರೆ. ಶಾಸಕರಾಗಿದ್ದ ಡಿವಿ ಮುಖ್ಯಮಂತ್ರಿಯಾದರೂ ಊರ ಜನರ ಗೋಳು ಕೇಳಲೇ ಇಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಯಡಿಯೂರಪ್ಪ ಅವರಿಗೂ ಇಲ್ಲಿನ ಜನತೆ ವಿಧಾನಸಭೆಯ ಮೆಟ್ಟಲು ಹತ್ತಿ ಸೇತುವೆ ಮಾಡಿಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲಿನ ಜನತೆಯ ಎಲ್ಲಾ ಕೆಲಸಗಳು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗಾಗಿದೆ. ಯಾವ ಪಕ್ಷದ ಜನಪ್ರತಿನಿಧಿಗಳು ಕೂಡ ಜನರ ಮನವಿಗೆ ಸ್ಪಂದಿಸಲೇ ಇಲ್ಲ..

ಸುಮಾರು 35 ಕ್ಕೂ ಹೆಚ್ಚು ಕುಟುಂಬಗಳು ಬಳಸುವ ಸೇತುವೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಯಾಕೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಈ ನಡುವೆ ಹಲವು ವರ್ಷಗಳಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಮಟ್ಟದ ಪರಿಶಿಷ್ಟ ಜಾತಿ-ಪಂಗಡದ ಕುಂದುಕೊರತೆ ಸಭೆಯಲ್ಲೂ ಈ ಸೇತುವೆಗಾಗಿ ಇಲ್ಲಿನ ಸ್ಥಳೀಯರು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ಯಾವುದೂ ಪ್ರಯೋಜನಕ್ಕೆ ಬಂದಿಲ್ಲ. ಮಳೆಗಾಲದಲ್ಲಿ ತುಂಬಿ ಹರಿಯುವ ಈ ಕಿರುಹೊಳೆಯನ್ನು ಶಾಲಾ ಮಕ್ಕಳು ದಾಟಲು ಹರಸಾಹಸ ಪಡಬೇಕು. ಜನರು ಹಾಲು ಸೊಸೈಟಿಗೆ ತರಬೇಕಾದರೆ ಸುಮಾರು 6 ಕಿಮೀ ದೂರ ಸುತ್ತಬೇಕು. ಅನಾರೋಗ್ಯಕ್ಕೆ ಈಡಾದರೆ ಆಸ್ಪತ್ರೆಗೆ ಒಯ್ಯುವುದಕ್ಕೂ ರಸ್ತೆ ಇಲ್ಲ. ವಾಹನ ಇಲ್ಲದೆ ಹೊತ್ತೊಯ್ಯಬೇಕಾದ ಪ್ರಸಂಗ ಬರುತ್ತದೆ. ಇಷ್ಟೊಂದು ಅವ್ಯವಸ್ಥೆ ತುಂಬಿರುವ ಈ ಹಳ್ಳಿಯ ಜನರ ಸೇತುವೆ ಬೇಡಿಕೆ ಬಗ್ಗೆ ಆಡಳಿತ ಅಸಡ್ಡೆ ವಹಿಸಿರೋದು ಆಕ್ರೋಶಕ್ಕೆ ಕಾರಣವಾಗಿದೆ. ಜನಪ್ರತಿನಿಧಿಗಳ ವಿರುದ್ಧ ಈಗ ಜನ ತಿರುಗಿ ಬಿದ್ದಿದ್ದು ಮುಂದಿನ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಚುನಾವಣೆ ಬಹಿಷ್ಕರಿಸಿದರೆ ಹೆಚ್ಚು ಬಿಸಿ ಮುಟ್ಟಬಹುದೆಂಬ ಲೆಕ್ಕಾಚಾರದಲ್ಲಿ ಜನ ಇದ್ದಾರೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm