ಬ್ರೇಕಿಂಗ್ ನ್ಯೂಸ್
01-01-22 04:03 pm HK Desk news ಕರಾವಳಿ
ಉಡುಪಿ, ಜ.1 : ಕೊರಗ ಸಮುದಾಯದ ಮೆಹಂದಿ ಪಾರ್ಟಿ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ದೈಹಿಕ ದೌರ್ಜನ್ಯ ನಡೆಸಿರುವ ಘಟನೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾಡಳಿತದಿಂದ ವರದಿ ಕೇಳಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರಿಂದ ಘಟನೆ ಬಗ್ಗೆ ಮಾಹಿತಿ ಕೇಳಿ ಆಯೋಗ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಪೊಲೀಸರು ಅಮಾಯಕ ಕೊರಗ ಸಮುದಾಯದ ಮೇಲೆ ಹಲ್ಲೆ ನಡೆಸಿರುವುದರಿಂದ ಜಿಲ್ಲೆಯ ಜನತೆಗೆ ಪೊಲೀಸರ ಮೇಲೆ ನಂಬಿಕೆ ಕುಸಿಯುವಂತಾಗಿದೆ. ಜನರನ್ನು ರಕ್ಷಣೆ ಮಾಡಬೇಕಾದವರು ಈ ರೀತಿ ವರ್ತಿಸಿದ್ದು ಸಮಾಜಕ್ಕೆ ತದ್ವಿರುದ್ಧ ಸಂದೇಶ ಹೋಗುವಂತಾಗಿದೆ. ಈ ಬಗ್ಗೆ ಎಸ್ಪಿ ಬಳಿ ವರದಿ ಕೇಳಿದ್ದೇವೆ. ಘಟನೆ ಬಗ್ಗೆ ಪರಾಮರ್ಶೆ ನಡೆಸಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.


ಡಿ.27ರಂದು ರಾತ್ರಿ ಕೋಟತ್ತಟ್ಟು ಗ್ರಾಮದ ಕೊರಗ ಸಮುದಾಯದ ಮನೆಯೊಂದರಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಹಾಕಿದ್ದಾರೆಂದು ನೀಡಿದ್ದ ಸಾರ್ವಜನಿಕ ದೂರು ಆಧರಿಸಿ ತೆರಳಿದ್ದ ಕೋಟ ಠಾಣೆ ಪೊಲೀಸರು ಮದುಮಗ ಸೇರಿದಂತೆ ಕೊರಗ ಕಾಲನಿಯ ನಿವಾಸಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು. ಈ ವೇಳೆ, ಮಹಿಳೆಯರು, ವೃದ್ಧರ ಮೇಲೂ ಲಾಠಿ ಏಟು ಬಿದ್ದಿತ್ತು ಎಂದು ಆರೋಪಿಸಲಾಗಿತ್ತು.

ಘಟನೆ ಭಾರೀ ವಿವಾದ ಪಡೆಯುತ್ತಲೇ ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದರು. ಎಸ್ಪಿ ನೀಡಿದ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಕೋಟ ಠಾಣೆ ಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಿದ್ದರು. ಘಟನೆ ರಾಜ್ಯದ ಗಮನ ಸೆಳೆದಿದ್ದು, ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಊರಲ್ಲೇ ಈ ರೀತಿ ನಡೆದಿದ್ದನ್ನು ಟೀಕಿಸಿದ್ದರು.
ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರ ಅಪವಿತ್ರ ಯತ್ನ ; ಭಾರೀ ಆಕ್ರೋಶ
ಕೊಂಡಾಣ ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಅಪಮಾನ ಕೃತ್ಯ ! ಕಾಂಡೋಮ್ ಪತ್ತೆ
ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್, ಸಿಎಂ ಬಿಎಸ್ವೈ ಭಾವಚಿತ್ರಕ್ಕೆ ಶಿಲುಬೆ ಹಾರ !! ಉಳ್ಳಾಲದಲ್ಲಿ ಕಿಡಿಗೇಡಿ ಕೃತ್ಯ
The lathi-charge and subsequent physical harassment in police station, done by Kota police on the Koraga community of Kotathattu gram panchayat limits, has drawn the attention of National Commission for Women (NCW). The commission has sought explanation from SP Vishnuvardhan of the district on the issue
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm