ಬ್ರೇಕಿಂಗ್ ನ್ಯೂಸ್

ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಪಾಕ್ ಮಾಜಿ ಸಚಿವ ಮೆಚ್ಚುಗೆ, ಕಾಂಗ್ರೆಸ್ ಕೇ ಹಾತ್, ಪಾಕಿಸ್ತಾನ್ ಕೆ ಸಾಥ್ ಎಂದು ಬಿಜೆಪಿ ಕೌಂಟರ್ ಪೋಸ್ಟ್, ಕಾಂಗ್ರೆಸ್ ನಾಯಕರು ಪಾಕ್ ಸ್ಲೀಪರ್ ಸೆಲ್‌ಗಳು ಎಂದ ಅಮಿತ್ ಮಾಳವೀಯ    |    Kudupu Murder, Mangalore Crime, Police: ಕುಡುಪು ಬಳಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ತಿರುವು ; ಕ್ರಿಕೆಟ್ ಆಡುತ್ತಿದ್ದ ಗುಂಪಿನಿಂದ ಹಲ್ಲೆ ಕೃತ್ಯ, ಹೊಟ್ಟೆಯೊಳಗೆ ರಕ್ತಸ್ರಾವದಿಂದ ಸಾವು, ಸಂತ್ರಸ್ತನ ಗುರುತು ಪತ್ತೆಗೆ ತಂಡ ರಚನೆ, 15 ಮಂದಿ ಬಂಧನ     |    Praveen Nettaru, Mohsin Shukur, Karwar Police: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಟ್ರೈನಿಂಗ್, ಕೆಜಿ ಹಳ್ಳಿ- ಡಿಜೆ ಹಳ್ಳಿ ಕೇಸಿನ ಕ್ರಿಮಿನಲ್ ಶಿರಸಿಯಲ್ಲಿ ಅರೆಸ್ಟ್! ತಲೆಮರೆಸಿಕೊಂಡ ಆರೇ ವರ್ಷದಲ್ಲಿ ಐವರು ಮಕ್ಕಳಿಗೆ ಅಪ್ಪ! ಆರೋಪಿ ಬಚ್ಚಿಟ್ಟ ಕುಟುಂಬಸ್ಥರ ವಿರುದ್ಧ ಕೇಸು       |   

ಪೊಲೀಸ್ ದೌರ್ಜನ್ಯ ; ಕೊರಗ ಕಾಲನಿಗೆ ಗೃಹ ಸಚಿವರ ಭೇಟಿ, ಪ್ರಕರಣದ ಬಗ್ಗೆ ಸಿಓಡಿ ತನಿಖೆಗೆ ಸೂಚನೆ ; ನಾನು ಕೂಡ ಕೊರಗರ ಜೊತೆ ಮೂಟೆ ಹೊರುತ್ತಿದ್ದೆ ಎಂದ ಸಚಿವ 

01-01-22 05:33 pm       Mangalore Correspondent   ಕರಾವಳಿ

ಮದುವೆ ಮನೆಯಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಕೋಟತಟ್ಟು ಗ್ರಾಮದ ಕೊರಗರ ಕಾಲನಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ. 

ಉಡುಪಿ, ಜ.1 : ಮದುವೆ ಮನೆಯಲ್ಲಿ ಪೊಲೀಸ್ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಕೋಟತಟ್ಟು ಗ್ರಾಮದ ಕೊರಗರ ಕಾಲನಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದಾರೆ. 

ಲಾಠಿಚಾರ್ಜ್ ಘಟನೆ ನಡೆದ ಮನೆಗೆ ಭೇಟಿ ನೀಡಿದ ಸಚಿವ ಆರಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾಲನಿ ನಿವಾಸಿಗಳ ಅಹವಾಲು ಆಲಿಸಿದರು. ಪೊಲೀಸರ ಕಾರ್ಯ ವೈಖರಿ ಬಗ್ಗೆ ನೋವು ವ್ತಕ್ತಪಡಿಸಿದ ಮದುವೆ ಮನೆಯ ಕುಟುಂಬಸ್ಥರು, ಮಕ್ಕಳು, ಮಹಿಳೆಯರು, ವೃದ್ಧರು ಎನ್ನುವ ಭೇದ ಇಲ್ಲದೆ ಲಾಠಿ ಏಟು ನೀಡಿದ್ದಾರೆ. ನಾವು ಏನು ತಪ್ಪು ಮಾಡಿದ್ದೇವೆ, ಯಾಕಾಗಿ ಹೊಡೆಯುತ್ತೀರಿ ಎಂದು ಕೇಳಿದ್ದಕ್ಕೆ ಉತ್ತರ ಇರಲಿಲ್ಲ. ಮದುಮಗನಿಗೂ ಹೊಡೆದಿದ್ದಾರೆ ಎಂದು ಹೇಳಿದರು. 

ಮರುದಿನ ನಮ್ಮನ್ನು ಠಾಣೆಗೆ ಕರೆದೊಯ್ದು ಬರಿಮೈಯಲ್ಲಿ ನಿಲ್ಲಿಸಿ ಹೊಡೆದಿದ್ದಾರೆ. ನಾವು ಮದ್ಯವ್ಯಸನಿಗಳು ಎಂದು ಆರೋಪಿಸಿ ಹೊಡೆದಿದ್ದಾರೆ. ನಾನು ಜೀವಮಾನದಲ್ಲಿ ಕುಡಿದವನೇ ಅಲ್ಲ. ಕಾಲನಿಯ ನಿವಾಸಿಗಳು ಮದ್ಯ ಕುಡಿಯದಂತೆ ಜಾಗೃತಿ ಮಾಡುತ್ತಿದ್ದೇವೆ.ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತೆ ಅಭಿಯಾನ ಮಾಡಿದ್ದೇವೆ. ನಾವು ಕಾಲನಿ ನಿವಾಸಿಗಳು ಯಾವುದೇ ಪೊಲೀಸ್ ಕೇಸು ಮಾಡಿಕೊಂಡವರೂ ಅಲ್ಲ. ನಮಗೆ ಬದುಕುವ ಹಕ್ಕು ಇಲ್ಲವೇ.. ನನ್ನ ತಮ್ಮ ಸರಕಾರಿ ಕೆಲಸದಲ್ಲಿದ್ದು ಅವನೇ ಕಾಲನಿ ನಿವಾಸಿಗಳಿಗೆ ಸ್ಫೂರ್ತಿ ಎಂದು ಮದುಮಗನ ಅಣ್ಣ ಗೃಹ ಸಚಿವರ ಬಳಿ ಅಲವತ್ತುಕೊಂಡರು.‌

ಪೊಲೀಸ್ ದೌರ್ಜನ್ಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಚಿವ ಆರಗ ಜ್ಞಾನೇಂದ್ರ, ಪೊಲೀಸರ ಅತಿರೇಕದ ವರ್ತನೆಯಿಂ ಬೇಸರವಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಪ್ರಕರಣವನ್ನು ಸಿಓಡಿಗೆ ಒಪ್ಪಿಸುತ್ತೇವೆ. ಸಿಓಡಿ ಸಂಸ್ಥೆಯ ಮೂಲಕ ಸಮಗ್ರ ತನಿಖೆ ಮಾಡುತ್ತೇವೆ ಎಂದು ಹೇಳಿದರು. 

ಪೊಲೀಸರ ಪ್ರತಿ ದೂರಿನ ಬಗ್ಗೆಯೂ ತನಿಖೆ ಮಾಡುತ್ತೇವೆ. ಸಂತ್ರಸ್ತ ಸಮುದಾಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ಕೊರಗ ಕುಟುಂಬದ ಜೊತೆ ರಾಜ್ಯ ಸರಕಾರ ಇದೆ. ಈ ಬಗ್ಗೆ ಯಾವುದೇ ಬೇಸರ ನಿಮಗೆ ಬೇಡ ಎಂದ ಗೃಹ ಸಚಿವರು, ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು. ಅಲ್ಲದೆ, ಸ್ಥಳದಲ್ಲೇ ಸಂತ್ರಸ್ತ 6 ಕುಟುಂಬಗಳಿಗೆ 50 ಸಾವಿರದ ಚೆಕ್ ಹಸ್ತಾಂತರ ಮಾಡಿದರು. 

ಕೊರಗರ ಜೊತೆ ಅಕ್ಕಿ ಮೂಟೆ ಹೊರುತ್ತಿದ್ದೆ.. 

ಇದೇ ವೇಳೆ, ತನ್ನ ಹಳೆಯ ಜೀವನವನ್ನು ನೆನಪಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾನು ಕೂಡಾ ಕೊರಗ ಸಮುದಾಯದ ಜೊತೆ ಬೆಳೆದಿದ್ದವನು. ಅಕ್ಕಿ ಗಿರಣಿಯಲ್ಲಿ ಕೊರಗ ಸಮುದಾಯದವರೊಂದಿಗೆ ಮೂಟೆ ಹೊರುತ್ತಿದ್ದೆ. ಅವರ ನೋವು, ನಲಿವು ನನಗೆ ಗೊತ್ತಿದೆ. ತಳಸ್ತರದ ಮುಗ್ದ ಸಮುದಾಯ ಇಂತಹ ಕಾರ್ಯಕ್ರಮ ಮಾಡಿದ್ದೇ ಅಪರೂಪ. ಈ ಘಟನೆಯಿಂದ ಸಮುದಾಯಕ್ಕೆ ನೋವಾಗಿದೆ. ಕುಟುಂಬಕ್ಕೆ ಆಘಾತವಾಗಿದೆ ಎಂದು ಹೇಳಿದರು.

ಮೆಹಂದಿ ಪಾರ್ಟಿಯಲ್ಲಿ ಲಾಠಿಚಾರ್ಜ್ ; ಪೊಲೀಸರ ಪ್ರತಿದೂರಿಗೆ ಸಿದ್ದರಾಮಯ್ಯ ಆಕ್ರೋಶ, ಸಚಿವ ಕೋಟಾಗೆ ತಿಳಿಯದೆ ಪ್ರಕರಣ ದಾಖಲಿಸಿದ್ದಾರೆಯೇ ?

ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್ 

ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ ! 

ಕೊರಗ ಕಾಲನಿಯಲ್ಲಿ ಲಾಠಿಚಾರ್ಜ್ ; ಘಟನೆ ಬಗ್ಗೆ ಎಸ್ಪಿಯಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

Udupi Kota Police atrocity on Koraga community Home Minister Araga Dnyanendra Visits spot orders compensation for those hit by police.