ಬ್ರೇಕಿಂಗ್ ನ್ಯೂಸ್
02-01-22 10:59 pm Mangalore Correspondent ಕರಾವಳಿ
ಮಂಗಳೂರು, ಜ.2 : ಆಡಿನ ಮರಿಯನ್ನು ರಕ್ಷಿಸಲು ಹೋಗಿ ಎರಡೂ ಕಾಲುಗಳನ್ನು ಕಳಕೊಂಡಿದ್ದ 21ರ ಹರೆಯದ ಯುವಕ ಕೊನೆಗೂ ಬದುಕಿ ಬರಲಿಲ್ಲ. ಕಾಲು ಕಳಕೊಂಡ ಬಳಿಕ ಮಾನಸಿಕವಾಗಿ ತೀವ್ರ ಆಘಾತ ಅನುಭವಿಸಿದ್ದ ಚೇತನ್ ಇಂದು ಕೊನೆಯುಸಿರು ಎಳೆದಿದ್ದಾರೆ.
ಕಳೆದ ಆಗಸ್ಟ್ ತಿಂಗಳ ಕೊನೆಯಲ್ಲಿ ಜೋಕಟ್ಟೆ ಬಳಿಯ ಅಂಗರಗುಂಡಿ ಎಂಬಲ್ಲಿ ದುರಂತ ನಡೆದಿತ್ತು. ತನ್ನ ಮನೆಯಿಂದ ಜೋಕಟ್ಟೆಯ ರೈಲ್ವೇ ಗೇಟನ್ನು ದಾಟಿಕೊಂಡು ಬಸ್ಸಿನ ನಿರ್ವಾಹಕನ ಕೆಲಸಕ್ಕೆ ಓಡುತ್ತಿದ್ದ ಚೇತನ್, ರೈಲು ಬರುತ್ತಿದ್ದ ಹಳಿಯಲ್ಲಿ ಆಡಿನ ಮರಿ ಇದ್ದುದನ್ನು ನೋಡಿ ಅದರ ರಕ್ಷಣೆಗೆ ಧಾವಿಸಿದ್ದರು. ಆಡಿನ ಮರಿಯನ್ನು ಹೊರಗೆಸೆದು ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಆತನ ಎರಡೂ ಕಾಲುಗಳ ಮೇಲಿನಿಂದ ಸಾಗಿತ್ತು. ಕೂಡಲೇ ಕಾಲಿನ ಜೊತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಚೇತನ್ ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಕಾಲು ಜೋಡಣೆ ಸಾಧ್ಯವಾಗಿರಲಿಲ್ಲ.

ನಾಲ್ಕು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿತ್ತು. ಬಸ್ಸಿನ ಸಿಬಂದಿ, ಜೋಕಟ್ಟೆಯ ಯುವಕರು ಭಿಕ್ಷೆ ಎತ್ತಿ ಚೇತನ್ ಚಿಕಿತ್ಸೆಗಾಗಿ ಹಣ ಒಟ್ಟು ಮಾಡಿದ್ದರು. ನಡುವೆ ಸ್ವಲ್ಪ ಚೇತರಿಸಿಕೊಂಡಿದ್ದ ಚೇತನ್ ಒಮ್ಮೆ ಮನೆಗೂ ಬಂದಿದ್ದ. ಆನಂತರ ಮಾನಸಿಕವಾಗಿ ಕುಗ್ಗಿದ ಚೇತನ್ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ.2ರಂದು ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು ತಂಗಿಯರನ್ನು ಹೊಂದಿದ್ದ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಚುರುಕಿನ ಹುಡುಗ ಚೇತನ್ ಅಗಲಿಕೆ ಸ್ಥಳೀಯ ಯುವಕರಲ್ಲಿ ಶೋಕ ಸಾಗರ ಸೃಷ್ಟಿಸಿದೆ.
ಜೋಕಟ್ಟೆ ; ರೈಲಿನಡಿಗೆ ಬೀಳುತ್ತಿದ್ದ ಆಡಿನ ಮರಿ ರಕ್ಷಿಸಲು ಹೋಗಿದ್ದ ಯುವಕ ತಂದುಕೊಂಡ ದುರಂತ !
Mangalore 21 year old bus conductor who saved goat from train accident dies at hospital after six months of suffering. Cheatan had lost both his legs in train accident after he went to save the goats on the track at Jokatte.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm