ಬ್ರೇಕಿಂಗ್ ನ್ಯೂಸ್
16-09-20 09:43 am Mangalore Reporter ಕರಾವಳಿ
ಮಂಗಳೂರು, ಸೆ.16: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಟ ಹೆಚ್ಚಿದ್ದು, ಶಾಸಕ ಭರತ್ ಶೆಟ್ಟಿ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಮರಳು ಮಾಫಿಯಾದಲ್ಲಿ ಶಾಸಕರ ಕೈವಾಡ ಇರುವ ಶಂಕೆಯಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೈಕಂಪಾಡಿ, ತಣ್ನೀರುಬಾವಿ, ನಾಯರ್ ಕುದ್ರು, ಮೀನಕಳಿಯ, ಅಡ್ಯಾರ್, ಪಡೀಲ್, ಅದ್ಯಪಾಡಿ ಮೊದಲಾದೆಡೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಶಾಸಕರು ವೌನ ವಹಿಸಿದ್ದು ನೋಡಿದರೆ ಅವರ ಕೈವಾಡ ಇರುವ ಸಂದೇಹ ಮೂಡುತ್ತದೆ. ಈ ಬಗ್ಗೆ ಕಾಂಗ್ರೆಸ್ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಪಚ್ಚನಾಡಿ ಸಂತೋಷ ನಗರದಲ್ಲಿ ಕುಡಿಯುವ ನೀರು ಸಿಗದ ಸ್ಥಿತಿಯಿದೆ. ಕ್ಷೇತ್ರದ ಶಾಸಕರು ಹಾಗು ಕಾರ್ಪೋರೇಟರ್ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸರಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮನೆ ಕಟ್ಟಿದರೂ ಶಾಸಕರು ಚಕಾರ ಎತ್ತಿಲ್ಲ. ಕಾಂಗ್ರೆಸ್ ಮತ್ತು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಲಸ ಸ್ಥಗಿತವಾಗಿದೆ ಎಂದರು.
ಆರ್ಥಿಕ ಕುಸಿತದಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಭಾಗಶಃ ಮುಚ್ಚಿವೆ. ಸಾವಿರಾರು ಜನ ಉದ್ಯೋಗ ಇಲ್ಲದಾಗಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಮೊಯ್ದಿನ್ ಬಾವ ಹೇಳಿದರು.
ಈ ವೇಳೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಮನಪಾ ಸದಸ್ಯ ಅನಿಲ್, ಜಿಪಂ ಮಾಜಿ ಸದಸ್ಯ ಮೆಲ್ವಿನ್ ಡಿಸೋಜ, ಉಮೇಶ್ ದಂಡಕೇರಿ ಉಪಸ್ಥಿತರಿದ್ದರು.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm