ಬ್ರೇಕಿಂಗ್ ನ್ಯೂಸ್
03-01-22 01:50 pm Mangaluru Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.3 : ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು ಮನೆಯಲ್ಲಿ ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆ ಸಂದರ್ಭದಲ್ಲಿ ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್ ಮದುವೆಯಾಗಿದ್ದ ದೀಪ್ತಿ ಮರಿಯಂ ಎಂಬವಳ ಬಗೆಗೂ ಸಂಶಯ ಕಂಡುಬಂದಿತ್ತು.
ಮರಿಯಂಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿ, ಕೊನೆಗೆ ಬಂಧನ ಮಾಡದೆ ತೆರಳಿದ್ದರು. ಆದರೆ ದೂರದಲ್ಲಿದ್ದುಕೊಂಡೇ ಆಕೆಯ ಬಗ್ಗೆ ನಿಗಾ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಅದೇ ಮನೆಗೆ ಎನ್ಐಎ ತಂಡ ಆಗಮಿಸಿದ್ದು ದೀಪ್ತಿ ಮರಿಯಂಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಬಾರಿ ಆಕೆಯನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೂಲತಃ ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು. ಆನಂತರ ಕಟ್ಟರ್ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು. ಅಲ್ಲದೆ, ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು.
Mangalore NIA Raids house of former MLA BM Idinabba for the second time in Ullal, chances of arresting Deepthi Marla. In the last raid Basha son Ammar was arrested on the charges of having links with ISIS. Deepthi who is said to be a Hindu was converted to Islam and was actively involved with ISIS activities supporting them online.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm