ಬ್ರೇಕಿಂಗ್ ನ್ಯೂಸ್
04-01-22 11:00 pm Mangalore Correspondent ಕರಾವಳಿ
ಮಂಗಳೂರು, ಜ.4 : ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಓಮಿಕ್ರಾನ್ ಪ್ರಕರಣಗಳೇ ಹೆಚ್ಚು ಅನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 75 ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ದಿನಕ್ಕೆ ಸರಾಸರಿ ಆರು ಸಾವಿರ ಮಂದಿಯ ಟೆಸ್ಟಿಂಗ್ ಆಗುತ್ತಿದೆ. ಒಂದು ದಿನದ ಅಂತರದಲ್ಲಿ ಆರೂವರೆ ಸಾವಿರ ಮಂದಿಗೆ ಹೆಚ್ಚುವರಿಯಾಗಿ ಟೆಸ್ಟಿಂಗ್ ಆಗಿದ್ದು, ಈ ಪೈಕಿ 75 ಮಂದಿ ಪಾಸಿಟಿವ್ ಆಗಿದ್ದಾರೆ.
ಸೋಮವಾರದ ವರದಿಯಲ್ಲಿ 52 ಮಂದಿ ಪಾಸಿಟಿವ್ ಆಗಿದ್ದರು. ಸರಾಸರಿ 5 ಸಾವಿರ ಮಂದಿಯ ಟೆಸ್ಟಿಂಗ್ ಆಗಿತ್ತು. ಪಾಸಿಟಿವ್ ಕಂಡುಬಂದ ಶಾಲೆ, ಹಾಸ್ಟೆಲ್ ಗಳನ್ನು ಗುರಿಯಾಗಿಸಿ ಅಲ್ಲಿರುವ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಆದರೆ ಈಗ ಪಾಸಿಟಿವ್ ಆಗುತ್ತಿರುವ ಹೆಚ್ಚಿನ ಮಂದಿ ಓಮಿಕ್ರಾನ್ ಸೋಂಕಿತರೇ ಆಗಿದ್ದಾರೆ ಅನ್ನುವ ಮಾಹಿತಿಗಳಿವೆ. ಈ ಬಗ್ಗೆ ಜಿಲ್ಲಾಡಳಿತದಿಂದ ಪ್ರತಿ ದಿನವೂ ಪಾಸಿಟಿವ್ ಆದವರನ್ನು ಜಿನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡಲಾಗುತ್ತಿದೆ. ಇದರ ವರದಿಯನ್ನು ಜಿಲ್ಲಾಡಳಿತ ಬಹಿರಂಗ ಪಡಿಸುತ್ತಿಲ್ಲ. ಹೆಚ್ಚಿನವರು ಓಮಿಕ್ರಾನ್ ಪಾಸಿಟಿವ್ ಆಗುತ್ತಿದ್ದಾರೆ ಅನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಶೀತ, ನೆಗಡಿ ಪ್ರಕರಣಗಳಲ್ಲಿ ಹೆಚ್ಚಿನ ಮಂದಿ ಪರೀಕ್ಷೆಗೆ ಒಳಪಡುತ್ತಿಲ್ಲ. ಇಂಥವರು ಕೂಡ ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ರಾಜ್ಯದಲ್ಲಿ ಮಂಗಳವಾರದ ವರದಿಯಲ್ಲಿ 2400ಕ್ಕೂ ಹೆಚ್ಚು ಮಂದಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಹೀಗಾಗಿ ಸೋಂಕು ಹರಡುವುದನ್ನು ತಪ್ಪಿಸಲು ಲಾಕ್ಡೌನ್ ಮಾದರಿಯ ನಿರ್ಬಂಧ ಹೇರಲು ರಾಜ್ಯ ಸರಕಾರ ಮುಂದಾಗಿದೆ. ಓಮಿಕ್ರಾನ್ ಸೋಂಕು ವೇಗವಾಗಿ ಹರಡುವುದರಿಂದ ಕೊರೊನಾ ಮತ್ತೆ ಹೆಚ್ಚುತ್ತಿದೆ ಎನ್ನಲಾಗುತ್ತಿದೆ.
Spike in Covid cases in Mangalore day by day most tested with Omicron says Helath department officials.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am