ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm