ಬ್ರೇಕಿಂಗ್ ನ್ಯೂಸ್
06-01-22 03:48 pm Mangalore Correspondent ಕರಾವಳಿ
ಮಂಗಳೂರು, ಜ.6 : ಓಮಿಕ್ರಾನ್ ಹೆಸರಲ್ಲಿ ರಾಜ್ಯ ಸರಕಾರ ವೀಕೆಂಡಲ್ಲಿ ಎರಡು ದಿನ ಕರ್ಫ್ಯೂ ವಿಧಿಸಿದೆ. ಅದರಂತೆ, ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಇದ್ದು, ಜನರು ಹೊರಗೆ ಓಡಾಡುವಂತಿಲ್ಲ ಎಂದು ರಾಜ್ಯ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಡಳಿತ, ವೀಕೆಂಡ್ ಕರ್ಫ್ಯೂ ಇದ್ದರೂ ಬಸ್, ಸಾರಿಗೆ ವಾಹನಗಳು ಓಡಾಡಬಹುದು. ಅಗತ್ಯ ಸಾಮಗ್ರಿಗಳ ಅಂಗಡಿಯನ್ನು ತೆರೆದಿಡಬಹುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ಸಾರ್ವಜನಿಕರ ತುರ್ತು ಓಡಾಟಕ್ಕೆ ಅವಕಾಶ ನೀಡುವ ಸಲುವಾಗಿ ಸಾರಿಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಅಗತ್ಯ ಸಾಮಗ್ರಿಗಳ ಅಂಗಡಿ, ವ್ಯಾಪಾರ ಸಂಸ್ಥೆಗಳನ್ನೂ ತೆರೆದಿಡಲು ಅವಕಾಶ ಇದೆ. ಸಾರ್ವಜನಿಕರು ತಮ್ಮ ಮನೆಯ ಬಳಿಯಲ್ಲೇ ಆದಷ್ಟು ಅಂಗಡಿಗೆ ತೆರಳಬೇಕು. ಆಮೂಲಕ ಸಾರ್ವಜನಿಕ ಸಂಚಾರಕ್ಕೆ ನಿಯಂತ್ರಣ ಹೇರಿ, ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ವೀಕೆಂಡಲ್ಲಿ ಶಾಲೆ, ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳು ರಜೆ ನೀಡಬೇಕು. ಪರೀಕ್ಷೆ ನಡೆಯುತ್ತಿದ್ದರೆ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ಸಂಚಾರ ನಡೆಸಬಹುದು. ಈಗಾಗ್ಲೇ ನಿಗದಿಯಾಗಿರುವ ಮದುವೆ ಇನ್ನಿತರ ಸಮಾರಂಭಗಳಿಗೆ ಅವಕಾಶ ಇರುತ್ತದೆ. ಆದರೆ ಸರಕಾರದ ಮಾರ್ಗಸೂಚಿಯಂತೆ 200 ಜನರಿಗೆ ಸೀಮಿತಗೊಳಿಸಬೇಕು ಎಂದಿದ್ದಾರೆ. ಅಲ್ಲದೆ, ಜನರು ಸ್ವಯಂಪ್ರೇರಿತರಾಗಿ ಕೋವಿಡ್ ವೈರಸ್ ಹರಡದಂತೆ ಜಾಗ್ರತೆ ವಹಿಸಬೇಕು. ಜನರು ಸ್ವಯಂ ಜಾಗೃತಿಯ ಮೂಲಕ ಲಾಕ್ಡೌನ್ ರೀತಿಯ ನಿರ್ಬಂಧ ಎದುರಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ
ವೀಕೆಂಡ್ ಕರ್ಫ್ಯೂ ವಿಧಿಸಿ ಜನರ ಸಂಚಾರವನ್ನು ಎರಡು ದಿನ ನಿರ್ಬಂಧಿಸುವ ಉದ್ದೇಶ ರಾಜ್ಯ ಸರಕಾರದ್ದಾಗಿದ್ದರೂ, ಜಿಲ್ಲಾಡಳಿತ ಜನರ ಸಂಚಾರಕ್ಕೆ ಸಾರಿಗೆ ವಾಹನಗಳಿಗೆ ಅವಕಾಶ ಕೊಟ್ಟು ಅಂಗಡಿಗಳನ್ನು ತೆರೆದಿಟ್ಟು ಕಾಟಾಚಾರಕ್ಕೆ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಸರಕಾರಿ ಕಚೇರಿಯನ್ನು ತೆರೆದಿಟ್ಟು ಜನರ ಓಡಾಟಕ್ಕೆ ಅವಕಾಶ ನೀಡುವುದಾದರೆ, ಖಾಸಗಿ ಕಚೇರಿ, ವ್ಯಾಪಾರ ಸಂಸ್ಥೆಗಳನ್ನು ಮಾತ್ರ ನಿರ್ಬಂಧಿಸಿದ ಮಾತ್ರಕ್ಕೆ ವೈರಸ್ ಹರಡುವುದಕ್ಕೆ ಬ್ರೇಕ್ ಬೀಳುತ್ತಾ ಅನ್ನುವ ಪ್ರಶ್ನೆಗೆ ಉತ್ತರ ಇಲ್ಲ.
Private buses and stores opened in Mangalore weekend Curfew states DC Rajendra. As per the new guidelines, a weekend curfew will be implemented in the state from Friday 10:00 pm to Monday 5:00 am for the next two weeks.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm