ಬ್ರೇಕಿಂಗ್ ನ್ಯೂಸ್
07-01-22 02:35 pm Mangalore Correspondent ಕರಾವಳಿ
ಬಂಟ್ವಾಳ, ಜ.7 : ತುಳುನಾಡಿನ ಜನರು ಆರಾಧಿಸುವ ಕೊರಗಜ್ಜನ ಮಾದರಿಯಲ್ಲಿ ವೇಷ ತೊಟ್ಟು ಮದುಮಗನೊಬ್ಬ ಮುಸ್ಲಿಂ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಆರೋಪಿತರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆಯಲ್ಲಿ ಈ ಘಟನೆ ನಡೆದಿದೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿತ್ತು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ಯುವಕರ ಗುಂಪು ಮದುಮಗನಿಗೆ ವಿಶಿಷ್ಟವಾಗಿ ಶೃಂಗರಿಸಿ, ಕರೆತಂದಿದ್ದರು.

ಆದರೆ ತಲೆಗೆ ಹಾಳೆಯ ಮುಂಡಾಸು, ಮುಖಕ್ಕೆ ಕಪ್ಪು ಮಸಿ ಹಾಕಿ, ಕುಣಿಯುತ್ತಾ ಬಂದಿದ್ದು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿದಾಡಿದ್ದಾರೆ. ಕೊರಗಜ್ಜನ ವೇಷದ ಮಾದರಿಯಲ್ಲಿ ಮುಖಕ್ಕೆ ಮಸಿ ಬಳಿದು ಕುಣಿದಿದ್ದು ಕೊರಗಜ್ಜ ದೈವ ಮತ್ತು ಕೊರಗ ಸಮುದಾಯವನ್ನು ಅಣಕ ಮಾಡಿದಂತಾಗಿದೆ ಎನ್ನುವ ಮಾತು ಕೇಳಿಬಂದಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಜಾಲತಾಣಗಳಲ್ಲಿ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೆ ನವರಾತ್ರಿ ಸಂದರ್ಭದಲ್ಲಿ ಕೊರಗರ ವೇಷ ಹಾಕುವ ಪದ್ಧತಿ ಇತ್ತು. ಬಳಿಕ ಅದನ್ನು ಸಮುದಾಯದ ನಿಂದನೆ ಅನ್ನುವ ನೆಲೆಯಲ್ಲಿ ನಿಷೇಧಿಸಲಾಗಿತ್ತು.
Bantwal Muslim wedding celebration, insult Koragajja by wearing costume, video goes viral in Mangalore. The video is said to be recorded last night creating controversy among Hindus.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm