ಬ್ರೇಕಿಂಗ್ ನ್ಯೂಸ್
10-01-22 10:24 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.10 : ಸೋಮೇಶ್ವರ ಗ್ರಾಮದ ಪಿಲಾರಿನಲ್ಲೀಗ ಸರ್ಪಗಳ ಹಾವಳಿ ಶುರುವಾಗಿದ್ದು ಮನೆಗೆ ಬಂದ ಸರ್ಪವನ್ನ ಹಿಡಿಯಲು ಹೋದ ಮಾಜಿ ಯೋಧನಿಗೆ ಹಾವು ಕಡಿದ ಘಟನೆ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಾಜಿ ಯೋಧ ಸದಾನಂದ ಗಟ್ಟಿ ಯಾನೆ ಬಾಬು ಗಟ್ಟಿ ಎಂಬವರು ಹಾವಿಂದ ಕಡಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಪೊದೆಗಳನ್ನ ಕಡಿದು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸಲಾಗಿದೆ. ಅನೇಕ ವರುಷಗಳಿಂದ ಇದ್ದ ಪೊದೆಗಳನ್ನ ಏಕಾಏಕಿ ಕಡಿದು ಸಮತಟ್ಟುಗೊಳಿಸಿದ ಪರಿಣಾಮ ಅಲ್ಲಿದ್ದ ಬೃಹದಾಕಾರದ ಸರ್ಪಗಳು ದಿಕ್ಕಾಪಾಲಾಗಿ ನೆರೆಹೊರೆಯ ಮನೆಗಳ ಆವರಣಕ್ಕೆ ಹೊಕ್ಕುತ್ತಿವೆ.


ಇಂದು ಮಧ್ಯಾಹ್ನ ಸದಾನಂದ ಗಟ್ಟಿ ಅವರ ಮನೆ ಆವರಣಕ್ಕೆ ಬೃಹತ್ ಸರ್ಪ ಹೊಕ್ಕಿದ್ದು ಗಟ್ಟಿ ಅವರು ಅದನ್ನ ಹಿಡಿದು ಗೋಣಿ ಚೀಲದಲ್ಲಿ ಹಾಕಿದ್ದಾರೆ. ಈ ನಡುವೆ ಸರ್ಪವು ಗಟ್ಟಿ ಅವರ ಬೆರಳಿಗೆ ಕಡಿದಿದ್ದು ಕೂಡಲೇ ಅವರನ್ನ ಮಂಗಳೂರಿನ ಪಾಧರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಭಾರತೀಯ ಸೇನೆಯಲ್ಲಿ ಪಳಗಿದ್ದ ಸದಾನಂದ ಗಟ್ಟಿ ಅವರು ಈ ಮೊದಲೂ ಅನೇಕ ವಿಷಕಾರಿ ಸರ್ಪಗಳನ್ನ ಹಿಡಿದು ಕಾಡಿಗೆ ಬಿಟ್ಟಿದ್ದರು. ಆದರೆ ಇಂದು ಸರ್ಪವನ್ನು ಹಿಡಿಯಲು ಹೋದ ಗಟ್ಟಿ ಅವರಿಗೆ ಸರ್ಪ ಕಡಿದಿದೆ.


ಹಳೆಯ ಪೊದೆಗಳನ್ನ ಕಡಿದು ಸಮತಟ್ಟುಗೊಳಿಸಿದ ಕಾರಣ ಈಗಾಗಲೇ ಪರಿಸರದಲ್ಲಿ ನಾಲ್ಕೈದು ಸರ್ಪಗಳು ದಿಕ್ಕಿಲ್ಲದೆ ಹರಿದಾಡುತ್ತಿದ್ದು ಇನ್ನಷ್ಟು ಸರ್ಪಗಳು ಬರುವ ಸಾಧ್ಯತೆಗಳಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಇಂದು ಮಧ್ಯಾಹ್ನ ಮಾಜಿ ಯೋಧ ಸದಾನಂದ ಗಟ್ಟಿ ಅವರಿಗೆ ಹಾವು ಕಡಿದ ನಂತರ ಅದೇ ಪರಿಸರದ ಮನೆಗಳ ಆವರಣಗಳಲ್ಲಿ ನಾಲ್ಕು ಸರ್ಪಗಳು ಕಾಣ ಸಿಕ್ಕಿವೆ.
Mangalore poisonous Snake bites man while catching in Pillar. Someshwar Resident X Military Man Sadanada Shetty was the man who was bitten by snake. He has been admitted to Fr Mullers Hospital in the city.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm