ಬ್ರೇಕಿಂಗ್ ನ್ಯೂಸ್
10-01-22 10:24 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.10 : ಸೋಮೇಶ್ವರ ಗ್ರಾಮದ ಪಿಲಾರಿನಲ್ಲೀಗ ಸರ್ಪಗಳ ಹಾವಳಿ ಶುರುವಾಗಿದ್ದು ಮನೆಗೆ ಬಂದ ಸರ್ಪವನ್ನ ಹಿಡಿಯಲು ಹೋದ ಮಾಜಿ ಯೋಧನಿಗೆ ಹಾವು ಕಡಿದ ಘಟನೆ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಾಜಿ ಯೋಧ ಸದಾನಂದ ಗಟ್ಟಿ ಯಾನೆ ಬಾಬು ಗಟ್ಟಿ ಎಂಬವರು ಹಾವಿಂದ ಕಡಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮೇಶ್ವರ ಗ್ರಾಮದ ಪಿಲಾರು ಮಹಾಲಕ್ಮೀ ಮಂದಿರ ಬಳಿಯ ದಿವಂಗತ ಪೊಲೀಸ್ ತ್ಯಾಂಪಣ್ಣ ಶೆಟ್ಟಿ ಅವರ ಜಮೀನಿನ ಪೊದೆಗಳನ್ನ ಕಡಿದು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸಲಾಗಿದೆ. ಅನೇಕ ವರುಷಗಳಿಂದ ಇದ್ದ ಪೊದೆಗಳನ್ನ ಏಕಾಏಕಿ ಕಡಿದು ಸಮತಟ್ಟುಗೊಳಿಸಿದ ಪರಿಣಾಮ ಅಲ್ಲಿದ್ದ ಬೃಹದಾಕಾರದ ಸರ್ಪಗಳು ದಿಕ್ಕಾಪಾಲಾಗಿ ನೆರೆಹೊರೆಯ ಮನೆಗಳ ಆವರಣಕ್ಕೆ ಹೊಕ್ಕುತ್ತಿವೆ.


ಇಂದು ಮಧ್ಯಾಹ್ನ ಸದಾನಂದ ಗಟ್ಟಿ ಅವರ ಮನೆ ಆವರಣಕ್ಕೆ ಬೃಹತ್ ಸರ್ಪ ಹೊಕ್ಕಿದ್ದು ಗಟ್ಟಿ ಅವರು ಅದನ್ನ ಹಿಡಿದು ಗೋಣಿ ಚೀಲದಲ್ಲಿ ಹಾಕಿದ್ದಾರೆ. ಈ ನಡುವೆ ಸರ್ಪವು ಗಟ್ಟಿ ಅವರ ಬೆರಳಿಗೆ ಕಡಿದಿದ್ದು ಕೂಡಲೇ ಅವರನ್ನ ಮಂಗಳೂರಿನ ಪಾಧರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಭಾರತೀಯ ಸೇನೆಯಲ್ಲಿ ಪಳಗಿದ್ದ ಸದಾನಂದ ಗಟ್ಟಿ ಅವರು ಈ ಮೊದಲೂ ಅನೇಕ ವಿಷಕಾರಿ ಸರ್ಪಗಳನ್ನ ಹಿಡಿದು ಕಾಡಿಗೆ ಬಿಟ್ಟಿದ್ದರು. ಆದರೆ ಇಂದು ಸರ್ಪವನ್ನು ಹಿಡಿಯಲು ಹೋದ ಗಟ್ಟಿ ಅವರಿಗೆ ಸರ್ಪ ಕಡಿದಿದೆ.


ಹಳೆಯ ಪೊದೆಗಳನ್ನ ಕಡಿದು ಸಮತಟ್ಟುಗೊಳಿಸಿದ ಕಾರಣ ಈಗಾಗಲೇ ಪರಿಸರದಲ್ಲಿ ನಾಲ್ಕೈದು ಸರ್ಪಗಳು ದಿಕ್ಕಿಲ್ಲದೆ ಹರಿದಾಡುತ್ತಿದ್ದು ಇನ್ನಷ್ಟು ಸರ್ಪಗಳು ಬರುವ ಸಾಧ್ಯತೆಗಳಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಇಂದು ಮಧ್ಯಾಹ್ನ ಮಾಜಿ ಯೋಧ ಸದಾನಂದ ಗಟ್ಟಿ ಅವರಿಗೆ ಹಾವು ಕಡಿದ ನಂತರ ಅದೇ ಪರಿಸರದ ಮನೆಗಳ ಆವರಣಗಳಲ್ಲಿ ನಾಲ್ಕು ಸರ್ಪಗಳು ಕಾಣ ಸಿಕ್ಕಿವೆ.
Mangalore poisonous Snake bites man while catching in Pillar. Someshwar Resident X Military Man Sadanada Shetty was the man who was bitten by snake. He has been admitted to Fr Mullers Hospital in the city.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am