ಬ್ರೇಕಿಂಗ್ ನ್ಯೂಸ್
16-01-22 11:17 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.16 : ಪ್ರಧಾನಿ ನರೇಂದ್ರ ಮೋದಿ ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ಆರಂಭಗೊಂಡಿದೆ. ದೇವಸ್ಥಾನದ ಮುಂಭಾಗದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಶೇಷ ರೀತಿಯ ಯಾಗ ನಡೆಸಲಾಗಿದೆ.
ಯಾಗ ಕರ್ತೃಗಳಾಗಿ ಸ್ವತಃ ಶಾಸಕ ಹರೀಶ್ ಪೂಂಜಾ ದಂಪತಿ ಕುಳಿತುಕೊಂಡಿದ್ದು, ಸಂಜೆ 4.30ಕ್ಕೆ ಯಾಗ ಪೂರ್ವ ವಿಧಿ ಕರ್ಮಗಳು ಆರಂಭಗೊಂಡಿದೆ. 80 ಜನ ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದಾರೆ. ಪ್ರಧಾನಿ ಮೋದಿ ಹೆಸರಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಈ ವೇಳೆ, ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಮಾಡಲಾಗಿದೆ. ಸಂಜೆ 4ರಿಂದ ಆರಂಭಗೊಂಡ ಯಾಗ ಕರ್ಮಾದಿಗಳು ರಾತ್ರಿ 9 ಗಂಟೆ ವರೆಗೆ ನಡೆದಿದ್ದು, ಪೂರ್ಣಾಹುತಿ ನಡೆದಿದೆ. ಭಾನುವಾರದ ಯಾಗ ಕಾರ್ಯದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾಗವಹಿಸಿದ್ದಾರೆ.


ಮೃತ್ಯುಂಜಯ ಯಾಗದ ಪ್ರಧಾನ ಯಜ್ಞಾದಿ ಕರ್ಮಗಳು ಸೋಮವಾರ ಬೆಳಗ್ಗೆ ನಡೆಯಲಿದೆ. ಬೆಳಗ್ಗೆ ಏಳು ಗಂಟೆಯಿಂದ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮದ ಬಳಿಕ ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಏಳು ಕುಂಡಗಳಿಗೆ ಏಳು ಹೆಸರಿಡಲಾಗಿದ್ದು, ಸದ್ಯೋಜಾತ ಕುಂಡ, ವಾಮದೇವ ಕುಂಡ, ಅಘೋರ ಕುಂಡ, ತತ್ಪುರುಷ ಕುಂಡ, ಈಶಾನ ಕುಂಡ, ತ್ರಯಂಬಕ ಕುಂಡ, ಮೃತ್ಯುಂಜಯ ಕುಂಡದಲ್ಲಿ ಯಾಗ ಹೋಮ ನಡೆಯಲಿದೆ.


ಕೆ.ಸಿ.ನಾಗೇಂದ್ರ ಭಾರದ್ವಾಜ್ ಮಾರ್ಗದರ್ಶನದಲ್ಲಿ ಯಾಗಾದಿ ಕಾರ್ಯಗಳು ನಡೆಯಲಿದ್ದು, ಎಲ್ಲವನ್ನೂ ಪ್ರಧಾನಿ ಮೋದಿ ಹೆಸರಲ್ಲಿ ಮಾಡಲಾಗುತ್ತಿದೆ. ಸೋಮವಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಚಿವ ಕೆ.ಎಸ್.ಈಶ್ವರಪ್ಪ, ಸಿಸಿ ಪಾಟೀಲ್, ಶಶಿಕಲಾ ಜೊಲ್ಲೆ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಕೂಡ ಪಾಲ್ಗೊಳ್ಳುವುದು ಖಾತ್ರಿಯಾಗಿತ್ತು. ಅವರಿಗೆ ಕೊರೊನಾ ಆಗಿರುವುದರಿಂದ ಪಾಲ್ಗೊಳ್ಳುತ್ತಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.
Special Yaga for increase in life span of Modi held at Dharmasthala temple by Harish Poonja.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am