ಬ್ರೇಕಿಂಗ್ ನ್ಯೂಸ್
16-09-20 09:48 pm Mangalore Reporter ಕರಾವಳಿ
ಮಂಗಳೂರು, ಸೆ.16: ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳಬೇಕು. ಎರಡು ವಾರದಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ, ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕೋವಿಡ್ 19, ಆಯುಷ್ಮಾನ್ ಭಾರತ್ ಕಾರ್ಡ್ ಕುರಿತಂತೆ ಮಂಗಳೂರು ಪುರಭವನದಲ್ಲಿ ಬುಧವಾರ ನಡೆದ ವಿಶೇಷ ಜನ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲೆಯಲ್ಲಿ ಒಟ್ಟು 95 ಖಾಸಗಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ, 32 ಆಸ್ಪತ್ರೆಗಳು ಕೊರೊನಾ ಹೊರತುಪಡಿಸಿ ಇತರೇ ರೋಗಗಳಿಗೆ ಅನ್ವಯವಾಗುವಂತೆ ಆಯುಷ್ಮಾನ್ ಯೋಜನೆ ನೋಂದಣಿ ಮಾಡಿದೆ. ಆದರೆ, ಕೊರೋನಾ ಚಿಕಿತ್ಸೆಗಾಗಿ 8 ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಇಟ್ಟು 12 ಆಸ್ಪತ್ರೆಗಳು ಮಾತ್ರ ನೋಂದಣಿ ಮಾಡಿರುವುದು. ಉಳಿದ 12 ಆಸ್ಪತ್ರೆಗಳು ನೋಂದಣಿ ಪ್ರಕ್ರಿಯೆ ಹಂತದಲ್ಲಿದೆ. ಆದರೆ, ಮುಂದಿನ ಎರಡು ವಾರದ ಗಡುವು ನೀಡುತ್ತಿದ್ದು ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿಯೂ ಕೊರೋನ ಚಿಕಿತ್ಸೆಯ ಕಾರಣಕ್ಕಾಗಿ ಆಯುಷ್ಮಾನ್ ನೋಂದಣಿ ಕಡ್ಡಾಯವಾಗಿ ಮಾಡಬೇಕು. ಕೊರೊನಾಗೆ ಚಿಕಿತ್ಸೆ ನೀಡುವ ಆಸ್ಪತ್ರೆಯವರು ದುಬಾರಿ ಮೊತ್ತ ಪಡೆಯುತ್ತಿರುವ ಆರೋಪವಿದೆ. ಇದು ನಿಜವಾಗಿದ್ದರೆ ತನಿಖೆ ನಡೆಸಿ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ನಲ್ಲಿ ಇದ್ದರೆ ಮಾತ್ರ ಆಯುಷ್ಮಾನ್ ಪ್ರಯೋಜನ ಸಿಗಲಿದೆ. ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೂ, ರೇಶನ್ ಕಾರ್ಡ್, ಆಧಾರ್ ಇದ್ದರೂ ಸೌಲಭ್ಯ ಸಿಗುತ್ತದೆ. ಆದರೆ, ಆಸ್ಪತ್ರೆಗೆ ಬಂದ 24 ಗಂಟೆಯಲ್ಲಿ ರೋಗಿ ಮೃತಪಟ್ಟರೆ ಆಯುಷ್ಮಾನ್ ಸೌಲಭ್ಯ ಸಿಗಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿ.ಪಂ., ಸಿಇಓ ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ ಎಸ್., ಡಿಸಿಪಿ ಅರುಣ್, ಮನಪಾ ಉಪ ಆಯುಕ್ತ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 06:15 pm
Mangalore Correspondent
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm