ಬ್ರೇಕಿಂಗ್ ನ್ಯೂಸ್
23-01-22 11:13 am Mangalore Correspondent ಕರಾವಳಿ
ಉಳ್ಳಾಲ, ಜ.23 : ಹೆದ್ದಾರಿಯಲ್ಲಿ ಸೂಚನೆ ನೀಡದೆ ಅಚಾನಕ್ಕಾಗಿ ತಿರುವು ಪಡೆದ ಕಾರು ಚಾಲಕನ ಪ್ರಾಣ ಉಳಿಸಲು ಹೋದ ಭಾರೀ ಗಾತ್ರದ ಟ್ರಕ್ ಕಮರಿಗೆ ಉರುಳಿ ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದೆ.
ಪುಣೆಯಿಂದ ಕೇರಳದ ಕಾಸರಗೋಡಿಗೆ ಟಾಟಾ ಹುಂಡೈ ಕಾರುಗಳನ್ನ ಹೊತ್ತೊಯ್ಯುತ್ತಿದ್ದ ಭಾರೀ ಗಾತ್ರದ ಟ್ರಕ್ ಕಾಪಿಕಾಡು ಎರಡನೇ ಅಡ್ಡ ರಸ್ತೆಯ ರಾಜ್ ಕೇಟರರ್ಸ್ ಬಳಿಯ ಕಮರಿಗೆ ಉರುಳಿದೆ. ಇಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ತೊಕ್ಕೊಟ್ಟಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಟ್ರಕ್ ಮುಂದುಗಡೆಯಿಂದ ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ಆಲ್ಫ್ರೆಡ್ ಗಾಡ್ ಫ್ರೀ ಡಿಸೋಜ ಎಂಬವರು ಬ್ರೀಝ ಕಾರು ಚಲಾಯಿಸುತ್ತಿದ್ದರು. ಕಾಪಿಕಾಡು ಎರಡನೇ ಅಡ್ಡ ರಸ್ತೆ ಬರುತ್ತಿದ್ದಂತೆ ಆಲ್ಪ್ರೆಡ್ ಅವರು ಯಾವುದೇ ಸೂಚನೆ ನೀಡದೆ ಅಚಾನಕ್ಕಾಗಿ ಕಾರನ್ನ ತಿರುಗಿಸಿದ್ದಾರೆ. ಇದರಿಂದ ವಿಚಲಿತನಾದ ಹಿಂಬದಿ ಇದ್ದ ಟ್ರಕ್ ಚಾಲಕ ಬಿಹಾರ ಮೂಲದ ರಮೇಶ್ ಕಾರನ್ನ ರಕ್ಷಿಸಲು ಹೋಗಿ ಟ್ರಕ್ಕನ್ನೇ ಕಮರಿಗೆ ಹಾಕಿದ್ದಾನೆ.






ತನ್ನ ಪ್ರಾಣ ರಕ್ಷಿಸಿದ ಪರಿಣಿತ ಚಾಲಕ ರಮೇಶನನ್ನು ಕಾರು ಚಾಲಕ ಆಲ್ಫ್ರೆಡ್ ಏಕ ವಚನದಲ್ಲಿ ನಿಂದಿಸಿ ತನ್ನದೇನೂ ತಪ್ಪಿಲ್ಲವೆಂದು ಬಿಂಬಿಸಿದ್ದಾರೆ. ಅಲ್ಲದೆ, ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರಿಗೂ ಕಾನೂನಿನ ಪಾಠ ಹೇಳಿ ಕೊಡಲು ಮುಂದಾಗಿದ್ದಾರೆ. ಅಷ್ಟರಲ್ಲೇ ಅಪಘಾತವಾದ ದೃಶ್ಯವು ಪಕ್ಕದ ಸಿಮೆಂಟ್ ಅಂಗಡಿಯ ಸಿಸಿ ಟಿವಿ ಫೂಟೇಜಲ್ಲಿ ಲಭಿಸಿದ್ದು ಇದನ್ನ ಕಂಡ ನಂತರ ಆಲ್ಪ್ರೆಡ್ ಗೆ ಜ್ನಾನೋದಯವಾಗಿದೆ. ಟ್ರಕ್ ಕಮರಿಗೆ ಉರುಳಿದ ಸಂದರ್ಭ ರಸ್ತೆ ಬದಿಯಲ್ಲಿ ಇಬ್ಬರು ಪಾದಚಾರಿಗಳು ನಿಂತಿದ್ದು ಕೂದಲೆಲೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Major trailer truck - car accident averted near Thokottu. The huge truck goes off road in order to save the car driver who took a sudden turn without any indication.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am