ಬ್ರೇಕಿಂಗ್ ನ್ಯೂಸ್
25-01-22 04:35 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.25 : ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಕೇರಳದ ಕಮ್ಯುನಿಸ್ಟ್ ಸರಕಾರದ ಕಾರಣ ಸ್ತಬ್ಧಚಿತ್ರ ನಿರಾಕರಣೆ ಆಗಿದೆಯೇ ವಿನಾ ಕೇಂದ್ರ ಸರಕಾರದ ನಿಲುವಿನಿಂದಾಗಿ ರದ್ದಾಗಿಲ್ಲ ಎಂದು ಮಂಗಳೂರಿನ ಬಿರುವೆರ್ ಕುಡ್ಲ ಹೇಳಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲ ಸಂಘಟನೆಯ ಲಕ್ಷ್ಮೀಶ ಸುವರ್ಣ, ಸಹನಾ ಕುಂದರ್ ಮತ್ತಿತರರು ನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಟ ನಡೆಸಿದವರು. ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೋಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಸರಕಾರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ಸರಕಾರ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನಾ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ನಾರಾಯಣ ಗುರುಗಳ ವಾಕ್ಯವನ್ನು ಪರಿಪಾಲಿಸುವ ನಾಯಕರಾಗಿದ್ದಾರೆ.
ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ. ಹಾಗೆಂದು ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲ ಸಂಘಟನೆಯ ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್, ರಕ್ಷಿತ್ ಸುವರ್ಣ ಇದ್ದರು.
Biruver Kudla organization has lamented the fact that some parties have been trying to mislead people in the name of Brahmashree Narayana Guru, who devoted himself to the ideals of one caste, one religion and one god, with an eye on reaping political benefits.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am