ಬ್ರೇಕಿಂಗ್ ನ್ಯೂಸ್
25-01-22 04:35 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.25 : ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಕೇರಳದ ಕಮ್ಯುನಿಸ್ಟ್ ಸರಕಾರದ ಕಾರಣ ಸ್ತಬ್ಧಚಿತ್ರ ನಿರಾಕರಣೆ ಆಗಿದೆಯೇ ವಿನಾ ಕೇಂದ್ರ ಸರಕಾರದ ನಿಲುವಿನಿಂದಾಗಿ ರದ್ದಾಗಿಲ್ಲ ಎಂದು ಮಂಗಳೂರಿನ ಬಿರುವೆರ್ ಕುಡ್ಲ ಹೇಳಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲ ಸಂಘಟನೆಯ ಲಕ್ಷ್ಮೀಶ ಸುವರ್ಣ, ಸಹನಾ ಕುಂದರ್ ಮತ್ತಿತರರು ನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಟ ನಡೆಸಿದವರು. ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೋಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಸರಕಾರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ಸರಕಾರ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನಾ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ನಾರಾಯಣ ಗುರುಗಳ ವಾಕ್ಯವನ್ನು ಪರಿಪಾಲಿಸುವ ನಾಯಕರಾಗಿದ್ದಾರೆ.
ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ. ಹಾಗೆಂದು ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲ ಸಂಘಟನೆಯ ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್, ರಕ್ಷಿತ್ ಸುವರ್ಣ ಇದ್ದರು.
Biruver Kudla organization has lamented the fact that some parties have been trying to mislead people in the name of Brahmashree Narayana Guru, who devoted himself to the ideals of one caste, one religion and one god, with an eye on reaping political benefits.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am