ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm