ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm