ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am