ಬ್ರೇಕಿಂಗ್ ನ್ಯೂಸ್
01-02-22 08:58 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಫೆ.1 : ನಗರದ ಬಳ್ಳಾಲ್ ಬಾಗ್ ನಲ್ಲಿರುವ ಶ್ರೀದೇವಿ ಕಾಲೇಜು ಆವರಣದಲ್ಲಿ ಹುಡುಗರ ತಂಡವೊಂದು ಕ್ಯಾಂಪಸ್ ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಬರ್ಕೆ ಠಾಣೆ ಮೆಟ್ಟಿಲೇರಿದೆ.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದೆ. ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಬಂದಿದ್ದು ಈ ವೇಳೆ ಕೇರಳ ಮೂಲದ ವಿದ್ಯಾರ್ಥಿಗಳಿಗೆ ವಾಹನ ತಾಗಿತ್ತು. ಇದರ ಬಗ್ಗೆ ಹುಡುಗರ ಗುಂಪು ಮತ್ತು ಮಲಯಾಳಿ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆದರೆ ಎರಡೂ ಕಡೆಯವರಿಗೆ ಭಾಷೆ ತಿಳಿಯದ ಕಾರಣ ಏನೇನೋ ಮಾತಾಡಿಕೊಂಡಿದ್ದರು. ಆನಂತರ ಅದೇ ಕಾಲೇಜಿನಲ್ಲಿ ಮಲಯಾಳಿ ವಿದ್ಯಾರ್ಥಿಗಳ ಸಹಪಾಠಿಯಾಗಿರುವ, ಮಂಗಳೂರಿನ ವಿದ್ಯಾರ್ಥಿಯೊಬ್ಬ ಅಲ್ಲಿಗೆ ಬಂದಿದ್ದು ಎರಡೂ ಗುಂಪಿನವರಿಗೆ ಬುದ್ಧಿಮಾತು ಹೇಳಿದ್ದಾನೆ. ಮಲಯಾಳ ಬಾರದ ಹುಡುಗರನ್ನು ಅಲ್ಲಿಂದ ಹೋಗುವಂತೆ ಹೇಳಿದ್ದ.

ಆದರೆ ಇದನ್ನೇ ನೆಪವಾಗಿರಿಸಿದ ಕಿಡಿಗೇಡಿ ಹುಡುಗರ ಗುಂಪು ಅಲ್ಲಿಂದ ಹಿಂತಿರುಗಿದ್ದು ಸ್ವಲ್ಪ ಹೊತ್ತಿನಲ್ಲಿ ಸ್ಥಳಕ್ಕೆ ತಲವಾರು ಹಿಡಿದು ಬಂದಿತ್ತು. ಐದಾರು ಮಂದಿ ಕಾಲೇಜು ಆವರಣಕ್ಕೆ ಬಂದು ಮಲಯಾಳಿಗಳು ಮತ್ತು ಇನ್ನೊಬ್ಬ ವಿದ್ಯಾರ್ಥಿಯನ್ನು ಹುಡುಕಾಟ ನಡೆಸಿದೆ. ತಲವಾರು ಹಿಡಿದು ಅತ್ತಿತ್ತ ಹೋಗಿದ್ದು, ಅಲ್ಲಿ ಮಲಯಾಳಿ ಹುಡುಗರಾಗಲೀ, ಬುದ್ಧಿಮಾತು ಹೇಳಿದ ವಿದ್ಯಾರ್ಥಿಯಾಗಲೀ ಸಿಕ್ಕಿರಲಿಲ್ಲ. ಹುಡುಗರು ಹೊರಗಿನವರಾಗಿದ್ದು, ಕಾಲೇಜಿಗೆ ಸಂಬಂಧಪಟ್ಟವರಲ್ಲ.

ಕಾಲೇಜು ಆವರಣದಲ್ಲಿ ತಲವಾರು ಹಿಡಿದು ಠಳಾಯಿಸಿದ ಹುಡುಗರ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದು, ಅದೀಗ ವೈರಲ್ ಆಗಿದೆ. ಬರ್ಕೆ ಠಾಣೆಯಲ್ಲಿ ಸ್ಥಳೀಯ ವಿದ್ಯಾರ್ಥಿ ದೂರು ನೀಡಿದ್ದು, ತಲವಾರು ಹಿಡಿದು ಬಂದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾನೆ. ಎರಡೂ ಕಡೆಯ ಗುಂಪನ್ನು ಠಾಣೆಗೆ ಕರೆಸಿ, ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.
Youths enter with Talwar to college Sridevi campus in Ballabagh, Mangalore. The video of this has gone goes viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am