ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm