ಬ್ರೇಕಿಂಗ್ ನ್ಯೂಸ್
04-02-22 05:34 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.4 : ಸೆಕ್ಯುಲರ್ ಸೋಗಲ್ಲಿ ಗೋವಿನ ಬದಲು ಹುಲಿಯನ್ನ ರಾಷ್ಟ್ರ ಪ್ರಾಣಿಯನ್ನಾಗಿಸಿದ್ದು ಗೋವಿನ ದುಸ್ಥಿತಿಗೆ ಕಾರಣ. ಅದರ ಪರಿಣಾಮ ಇಂದು ದೇಶದಲ್ಲಿ ರಕ್ತಪಾತ, ಮತಾಂತರಗಳಂತಹ ದುಷ್ಕೃತ್ಯಗಳು ನಿರಂತರವಾಗಿವೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಆರೆಸ್ಸೆಸ್ ಪ್ರಮುಖ್ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಗುರುವಾರ ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಗೋಶಾಲೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಹುಲಿಯನ್ನ ರಾಷ್ಟ್ರ ಪ್ರಾಣಿ ಅಂದಾಕ್ಷಣ ಅದನ್ನ ಆರತಿ ಎತ್ತಿ ಪೂಜೆ ಮಾಡಲು ಸಾಧ್ಯವೇ ? ತಾಯಿ ಸಮಾನ ಗೋವಿಗೆ ಮಾತ್ರ ಆ ಪೂಜೆ ಸಲ್ಲಲು ಸಾಧ್ಯ. ಜಾತ್ಯತೀತ ಚಿಂತನೆಯಲ್ಲಿ ಹುಲಿಯನ್ನ ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಿದ್ದಾರೆಯೇ ಹೊರತು ಅದರ ಮೇಲಿನ ಪ್ರೀತಿಯಿಂದಲ್ಲ. ಭಾರತದ ಜನ ಹೆಚ್ಚು ಪ್ರೀತಿಸಿ ಸಾಕಿದ್ದು ದನವನ್ನು. ಸಾವಿರಾರು ವರ್ಷದಿಂದಲೂ ಗೋವು ನಮ್ಮ ಪೂಜನೀಯ ರಾಷ್ಟ್ರ ಪ್ರಾಣಿಯಾಗಿದೆ ಎಂದರು.

ನಾವಿಂದು ಪುರಾಣದ ಬಕಾಸುರನ ಸಾಮ್ರಾಜ್ಯದ ಹಿಂದೂಗಳಾಗಿದ್ದೇವೆ. ಬಕಾಸುರರ ಆಹಾರಕ್ಕಾಗಿ ನಾವೇ ಖುದ್ದು ನಿತ್ಯ ನಿರಂತರ ಗೋವನ್ನ ಒದಗಿಸುತ್ತಿದ್ದೇವೆ. ನಾವೆಲ್ಲ ವಾಸ್ತವ ಅರಿತು ಎಚ್ಚೆತ್ತುಕೊಂಡು ಗೋವಿನ ರಕ್ಷಣೆಗೆ ಸದೃಢ ಹಿಂದು ಸಮಾಜ ಕಟ್ಟಬೇಕಿದೆ. ಸ್ವದೇಶಿ ಹಸುವಿನ ಹಾಲಿಗಿಂತ ಶ್ರೇಷ್ಠ ಯಾವುದೂ ಇಲ್ಲ. ಅದು ತಾಯಿಯ ಎದೆ ಹಾಲಿನ ಸಮಾನವಾಗಿದ್ದು , ಸ್ವದೇಶಿ ಹಸುಗಳ ವೃದ್ಧಿಗೆ ಶ್ರಮಿಸುತ್ತಿರುವ ಅಮೃತಧಾರ ಗೋಶಾಲೆಯ ಬಗ್ಗೆ ಪ್ರಭಾಕರ ಭಟ್ ಪ್ರಶಂಸೆ ವ್ಯಕ್ತ ಪಡಿಸಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಮುಖರಾದ ಪಟ್ಲ ಸತೀಶ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದು, ಸೇವಾ ಮನೋಭಾವ ಬೆಳೆಸಿಕೊಂಡಿರುವ ರಾಜಾರಾಂ ಭಟ್ ಅವರು ಗೋ ಸೇವೆಯ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದರು.

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅಧ್ಯಕ್ಷತೆ ವಹಿಸಿದ್ದರು. ಮಾತಾ ಡೆವಲಪರ್ಸ್ ನ ಮಾಲಕರಾದ ಸಂತೋಷ್ ಶೆಟ್ಟಿ, ಹವ್ಯಕ ಸಂಘದ ಅಧ್ಯಕ್ಷ ನಾಗರಾಜ ಭಟ್ , ಹಿಂದು ಸಂಘಟನೆ ಮುಖಂಡರಾದ ಗಣೇಶ್ ಕೆದಿಲ, ಮಿಥುನ್ ಕಲ್ಲಡ್ಕ, ವಿಜಿತ್ ಶೆಟ್ಟಿ ಉಪಸ್ಥಿತರಿದ್ದರು. ಗೋಶಾಲೆಯ ಸಂಚಾಲಕರಾದ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿ,ಪ್ರಸ್ತಾವಿಸಿದರು.
Mangalore Our cows are slaughtered every day for the meal of Gluttons says Dr Kalladka Prabhakar Bhat speaking at Amruthadara Cow Ashram.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am