ಬ್ರೇಕಿಂಗ್ ನ್ಯೂಸ್
05-02-22 02:02 pm HK Desk news ಕರಾವಳಿ
ಉಡುಪಿ, ಫೆ.5 : ಉಡುಪಿ ಮತ್ತು ಕುಂದಾಪುರದಲ್ಲಿ ಹಿಜಾಬ್ - ಕೇಸರಿ ವಿವಾದ ತಾರಕಕ್ಕೇರಿದೆ. ಇಂದು ಹಿಂದು ವಿದ್ಯಾರ್ಥಿನಿಯರು ಕೂಡ ಕೇಸರಿ ಶಾಲು ಹಾಕ್ಕೊಂಡು ಕಾಲೇಜಿಗೆ ಬಂದಿದ್ದು ಹೊಸ ತಿಕ್ಕಾಟಕ್ಕೆ ಆಸ್ಪದ ಕೊಟ್ಟಿದ್ದಾರೆ. ಇದೇ ವೇಳೆ, ಕುಂದಾಪುರದ ಖಾಸಗಿ ಆರ್.ಎನ್ ಶೆಟ್ಟಿ ಕಾಲೇಜಿನಲ್ಲು ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಬಂದಿದ್ದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಆರ್.ಎನ್ ಶೆಟ್ಟಿ ಕಾಲೇಜು ಮುಂದೆ ಕೇಸರಿ ಮತ್ತು ಬುರ್ಖಾ ತೊಟ್ಟ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು ಹೈಡ್ರಾಮಾ ನಡೆಸಿದ್ದಾರೆ. ವಿವಾದ ಏರ್ಪಟ್ಟ ಬಳಿಕ ಆರ್. ಎನ್ ಶೆಟ್ಟಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಹೈಕೋರ್ಟ್ ತೀರ್ಪು ಬರುವ ತನಕವೂ ಕಾಲೇಜಿಗೆ ರಜೆ ಘೋಷಿಸಲಾಗಿದೆ.


ಕೇಸರಿ ತೊಟ್ಟ ವಿದ್ಯಾರ್ಥಿಗಳು ಜೈಶ್ರೀರಾಮ್, ಹರ ಹರ ಮಹಾದೇವ ಎನ್ನುವ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ್ದಾರೆ. ವಿವಾದ ಜೋರಾಗುತ್ತಲೇ ಆರ್ ಎನ್ ಶೆಟ್ಟಿ ಕಾಲೇಜು ಆಡಳಿತದ ಜೊತೆಗೆ ಪೊಲೀಸರು ಸಭೆ ನಡೆಸಿದ್ದು ಬಳಿಕ ರಜೆ ಘೋಷಿಸುವ ನಿರ್ಧಾರಕ್ಕೆ ಬರಲಾಗಿದೆ.

ಇದೇ ವೇಳೆ, ಕುಂದಾಪುರ ಪೇಟೆಯಲ್ಲಿ ಕೇಸರಿ ಶಾಲು ತೊಟ್ಟು ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳನ್ನು ಪೊಲೀಸರು ನೇರ ಮನೆಗೆ ತೆರಳುವಂತೆ ಸೂಚನೆ ನೀಡಿದ್ದಾರೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲೂ ವಿದ್ಯಾರ್ಥಿನಿಯರು ಕೇಸರಿ ಶಾಲುಗಳನ್ನು ತೊಟ್ಟು ಬಂದಿದ್ದು ಮೆರವಣಿಗೆ ಮಾಡಿದ್ದಾರೆ. ಹಿಜಾಬ್ ಕಳಚುವ ತನಕ ಕೇಸರಿ ತೊಡುತ್ತೇವೆ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಬೇಡ ಎಂದು ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಪಾರಿಜಾತ ಸರ್ಕಲ್ ನಿಂದ ಭಂಡಾರ್ಕರ್ಸ್ ಕಾಲೇಜ್ ಗೇಟ್ ತನಕ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ಕಾಲೇಜಿಗೆ ತೆರಳಿದ್ದಾರೆ.


ವಿವಾದ ಹಿನ್ನೆಲೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಸದಸ್ಯರು ಪೋಷಕರ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಬಂದ ಪೋಷಕರು, ಮುಸ್ಲಿಂ ವಿದ್ಯಾರ್ಥಿನಿಯರು, ಪ್ರಾಂಶುಪಾಲರಿಗೆ ನಾವು ಮನವಿ ಪತ್ರವನ್ನು ಕೊಟ್ಟಿದ್ದೇವೆ. ತಲೆಗೆ ಸ್ಕಾರ್ಫ್ ತೊಡಲು ಅವಕಾಶ ಕೋರಿದ್ದೇವೆ. ನಾವು ಕುಂದಾಪುರದಲ್ಲಿ ಎಷ್ಟು ವರ್ಷ ಅನ್ಯೋನ್ಯತೆಯಿಂದ ಇದ್ದೆವು. ಈಗ ರಾಜಕೀಯ ಬೆರೆತು ವಿವಾದ ಆಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ನಮಗೆ ಮುಖ್ಯ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.
Kundapur hijab row turns ugly college declares holiday, Hindu and Muslim students protest on street. The row over wearing hijab at Government PU College in Kundapura continued for the third day with Principal Raghavendra B G attempting to seal the gate to prevent Muslim girl students from attending classes wearing headscarf on Friday.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm