ಬ್ರೇಕಿಂಗ್ ನ್ಯೂಸ್
05-02-22 02:14 pm HK Desk news ಕರಾವಳಿ
ಪುತ್ತೂರು, ಫೆ.5 : ಹಿರಿಯ ಪತ್ರಕರ್ತ, ಪುತ್ತೂರಿನಲ್ಲಿ ಉದಯವಾಣಿ ಪತ್ರಿಕೆಯನ್ನು ಜನಪ್ರಿಯರಾಗಿಸಿದ್ದ ಬಿ.ಟಿ ರಂಜನ್ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಕಾರಣ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ವಿವಿಧ ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಮುಂಗಾರು ಪತ್ರಿಕೆಯಿಂದ ಕೆಲಸ ಆರಂಭಿಸಿ, ಬಳಿಕ ಹೊಸದಿಗಂತ, ಆನಂತರ ಉದಯವಾಣಿ ಸೇರಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್, ಅದರಲ್ಲಿ ಸುದೀರ್ಘ 26 ವರ್ಷ ಕಾಲ ದುಡಿದಿದ್ದರು. ಪುತ್ತೂರು ಸುದಿನ ಪುಟದ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು. ಉದಯವಾಣಿ ಪುತ್ತೂರಿನಲ್ಲಿ ಪ್ರಸಾರ ಹೆಚ್ಚಿಸಲು ಮತ್ತು ಜನಮನ ಮುಟ್ಟುವಲ್ಲಿ ರಂಜನ್ ಬರಹಗಳು ಕಾರಣವಾಗಿದ್ದವು.
2017ರಲ್ಲಿ ಉದಯವಾಣಿಯಿಂದ ನಿವೃತ್ತರಾಗಿದ್ದ ರಂಜನ್, ಆಬಳಿಕ ಹೊಸದಿಗಂತ ಪತ್ರಿಕೆಗೆ ವರದಿಗಾರರಾಗಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ರಂಜನ್ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಕ್ಕೂ ಹೆಚ್ಚಿನ ಪತ್ರಿಕಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.
Puttur Senior Journalist B T Ranjan passes away at 60. Since two to there days he was suffering from Cold and Cough but he breathed his last at Puttur Hospital.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm