ಬ್ರೇಕಿಂಗ್ ನ್ಯೂಸ್
05-02-22 02:14 pm HK Desk news ಕರಾವಳಿ
ಪುತ್ತೂರು, ಫೆ.5 : ಹಿರಿಯ ಪತ್ರಕರ್ತ, ಪುತ್ತೂರಿನಲ್ಲಿ ಉದಯವಾಣಿ ಪತ್ರಿಕೆಯನ್ನು ಜನಪ್ರಿಯರಾಗಿಸಿದ್ದ ಬಿ.ಟಿ ರಂಜನ್ (60) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಕಾರಣ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ವಿವಿಧ ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಮುಂಗಾರು ಪತ್ರಿಕೆಯಿಂದ ಕೆಲಸ ಆರಂಭಿಸಿ, ಬಳಿಕ ಹೊಸದಿಗಂತ, ಆನಂತರ ಉದಯವಾಣಿ ಸೇರಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್, ಅದರಲ್ಲಿ ಸುದೀರ್ಘ 26 ವರ್ಷ ಕಾಲ ದುಡಿದಿದ್ದರು. ಪುತ್ತೂರು ಸುದಿನ ಪುಟದ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದರು. ಉದಯವಾಣಿ ಪುತ್ತೂರಿನಲ್ಲಿ ಪ್ರಸಾರ ಹೆಚ್ಚಿಸಲು ಮತ್ತು ಜನಮನ ಮುಟ್ಟುವಲ್ಲಿ ರಂಜನ್ ಬರಹಗಳು ಕಾರಣವಾಗಿದ್ದವು.
2017ರಲ್ಲಿ ಉದಯವಾಣಿಯಿಂದ ನಿವೃತ್ತರಾಗಿದ್ದ ರಂಜನ್, ಆಬಳಿಕ ಹೊಸದಿಗಂತ ಪತ್ರಿಕೆಗೆ ವರದಿಗಾರರಾಗಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ರಂಜನ್ ಕಾರ್ಯ ನಿರ್ವಹಿಸಿದ್ದರು. ಮೂರು ದಶಕಕ್ಕೂ ಹೆಚ್ಚಿನ ಪತ್ರಿಕಾ ಸೇವೆಗಾಗಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.
Puttur Senior Journalist B T Ranjan passes away at 60. Since two to there days he was suffering from Cold and Cough but he breathed his last at Puttur Hospital.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm