ಬ್ರೇಕಿಂಗ್ ನ್ಯೂಸ್
05-02-22 10:26 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ನಗರದ ಕೊಡಿಯಾಲ್ ಬೈಲ್ನ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದರು.
ಪ್ರಶಸ್ತಿಗಾಗಿ ನಾವು ಎಂದೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದರು.
ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಪೂರ್ತಿಯ ಸೆಲೆಯಂತಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿಯಬೇಕು ಎಂದು ತಿಳಿಸಿದರು. ಗುಡ್ಡದಲ್ಲಿ ಮೂರು ಬಾವಿ ಅಗೆದು ನೀರು ಸಿಗದೆ ಸುರಂಗ ತೋಡಲು ಮುಂದಾದಾಗ ಇವನ್ಯಾಕೆ ಗುಡ್ಡದಲ್ಲಿ ಇನ್ನೂ ಇದ್ದಾನೆ, ಅಲ್ಲಿ ನೀರು ಸಿಗದು ಎಂದೇ ಹೆಚ್ಚಿನವರು ಹೇಳಿದ್ದರು.
ಆದರೆ ಅಂದು ನನಗೆ ಅದು ಅನಿವಾರ್ಯವಾಗಿತ್ತು. ನಾನು ಛಲ ಬಿಡದೆ ಯಾಕೆ ನೀರು ಸಿಗುವುದಿಲ್ಲ ಎಂದು ನನ್ನ ಕಾಯಕ ಮಾಡಿದೆ. ಅದಕ್ಕೆ ಫಲ ದೊರಕಿದೆ. ಇಂದು ಬೋಳುಗುಡ್ಡದಲ್ಲಿ ಹಚ್ಚ ಹಸಿರಿನ ಕೃಷಿ ಇದೆ. ಮಳೆ ನೀರನ್ನು ಕೂಡ ನನ್ನ ಜಾಗದಿಂದ ಹೊರ ಹೋಗದಂತೆ ಮಾಡಿ ಅಂತರ್ಜಲವನ್ನು ಕಾಪಾಡಿಕೊಂಡು ಬಂದಿದ್ದೇನೆ ಎಂದವರು ಹೇಳಿದರು. ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
No application for Rajyotsava awards says Sunil Kumar during media interaction in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm