ಬ್ರೇಕಿಂಗ್ ನ್ಯೂಸ್
05-02-22 10:26 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ನಗರದ ಕೊಡಿಯಾಲ್ ಬೈಲ್ನ ಶಾರದಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಮಾತನಾಡಿದರು.
ಪ್ರಶಸ್ತಿಗಾಗಿ ನಾವು ಎಂದೂ ಹುಡುಕಿಕೊಂಡು ಹೋಗಬಾರದು. ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಅವರು ಹೇಳಿದರು.
ಮಹಾಲಿಂಗ ನಾಯ್ಕರದ್ದು ಮೌನ ಕ್ರಾಂತಿ. ಅವರು ವಾಸವಿದ್ದ ಗುಡ್ಡದಲ್ಲಿ ಬಾವಿ ತೋಡಿ ನೀರು ಸಿಗದಿದ್ದಾಗ ಅವರು ವಿಚಲಿತರಾಗದೆ ನಿರಂತರ ಶ್ರಮದಿಂದ ಅವರು ಕಲಿಯುಗದಲ್ಲಿ ಸುರಂಗವನ್ನು ಕೊರೆದು ಗಂಗೆಯನ್ನು ಭೂಮಿಗೆ ತರಿಸಿದ ಸಾಧನೆ ಎಲ್ಲರಿಗೂ ಸ್ಪೂರ್ತಿಯ ಸೆಲೆಯಂತಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಲಿಂಗ ನಾಯ್ಕ, ಇಂದು ನೀರಿಗಾಗಿ ಸಮಸ್ಯೆಗಳು ಹೆಚ್ಚಾಗುತ್ತಿರುವಂತೆಯೇ ಮುಂದಿನ ದಿನಗಳಲ್ಲಿ ನೀರು ಬಂಗಾರಕ್ಕಿಂತಲೂ ಹೆಚ್ಚು ಬೆಲೆ ಬಾಳಲಿದೆ. ಅದಕ್ಕಾಗಿ ನೀರಿನ ಮಹತ್ವವನ್ನು ಅರಿಯಬೇಕು ಎಂದು ತಿಳಿಸಿದರು. ಗುಡ್ಡದಲ್ಲಿ ಮೂರು ಬಾವಿ ಅಗೆದು ನೀರು ಸಿಗದೆ ಸುರಂಗ ತೋಡಲು ಮುಂದಾದಾಗ ಇವನ್ಯಾಕೆ ಗುಡ್ಡದಲ್ಲಿ ಇನ್ನೂ ಇದ್ದಾನೆ, ಅಲ್ಲಿ ನೀರು ಸಿಗದು ಎಂದೇ ಹೆಚ್ಚಿನವರು ಹೇಳಿದ್ದರು.
ಆದರೆ ಅಂದು ನನಗೆ ಅದು ಅನಿವಾರ್ಯವಾಗಿತ್ತು. ನಾನು ಛಲ ಬಿಡದೆ ಯಾಕೆ ನೀರು ಸಿಗುವುದಿಲ್ಲ ಎಂದು ನನ್ನ ಕಾಯಕ ಮಾಡಿದೆ. ಅದಕ್ಕೆ ಫಲ ದೊರಕಿದೆ. ಇಂದು ಬೋಳುಗುಡ್ಡದಲ್ಲಿ ಹಚ್ಚ ಹಸಿರಿನ ಕೃಷಿ ಇದೆ. ಮಳೆ ನೀರನ್ನು ಕೂಡ ನನ್ನ ಜಾಗದಿಂದ ಹೊರ ಹೋಗದಂತೆ ಮಾಡಿ ಅಂತರ್ಜಲವನ್ನು ಕಾಪಾಡಿಕೊಂಡು ಬಂದಿದ್ದೇನೆ ಎಂದವರು ಹೇಳಿದರು. ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಶಾರದಾ ವಿದ್ಯಾಲಯದ ಮುಖ್ಯಸ್ಥ ಎಂ.ಬಿ. ಪುರಾಣಿಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
No application for Rajyotsava awards says Sunil Kumar during media interaction in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am