ಬ್ರೇಕಿಂಗ್ ನ್ಯೂಸ್
08-02-22 11:44 am HK Desk news ಕರಾವಳಿ
ಉಡುಪಿ, ಫೆ.8 : ಉಡುಪಿ ಎಂಜಿಎಂ ಕಾಲೇಜು ಆವರಣದಲ್ಲಿ ಕೇಸರಿ ಮತ್ತು ಹಿಜಾಬ್ ಕಿಚ್ಚು ತೀವ್ರಗೊಂಡಿದ್ದು ವಿದ್ಯಾರ್ಥಿಗಳು ಹೈಡ್ರಾಮಾ ನಡೆಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಕೇಸರಿ ತೊಟ್ಟು ಕಾಲೇಜು ಒಳಗೆ ಲಗ್ಗೆ ಇಟ್ಟಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆಯೇ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಎರಡೂ ಕಡೆಯಿಂದ ವಿದ್ಯಾರ್ಥಿಗಳು ಗುಂಪು ಸೇರಿದ್ದು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು, ತಮಗೆ ಹಿಜಾಬ್ ಬೇಕೆಂದು ಘೋಷಣೆ ಕೂಗಿದರೆ, ಹಿಂದು ವಿದ್ಯಾರ್ಥಿಗಳು ವಿರೋಧಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ಹಾಕಿಕೊಂಡು ಕಾಲೇಜು ಒಳನುಗ್ಗಿದ್ದು ಕಾಲೇಜು ಆವರಣದಲ್ಲಿ ಕೇಸರಿ ಕಲರವ ಎದ್ದಿದೆ. ವಿದ್ಯಾರ್ಥಿಗಳು ತಮ್ಮ ಕೇಸರಿ ಶಾಲನ್ನು ಬೀಸಿಕೊಂಡು ಓಡಾಡುತ್ತಿದ್ದು ಕ್ಯಾಂಪಸ್ ಒಳಗೆ ಗಲಾಟೆ ಎದ್ದಿದೆ. ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯಕ್ ಮತ್ತು ಇತರ ಸಿಬಂದಿ ಸೇರಿ ವಿದ್ಯಾರ್ಥಿಗಳ ಮನವೊಲಿಕೆ ಮಾಡುತ್ತಿದ್ದಾರೆ.


ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು, ನಾವು ಕಳೆದ ಐದು ವರ್ಷದಿಂದಲೂ ಹಿಜಾಬ್ ಹಾಕಿಯೇ ಬರುತ್ತಿದ್ದೆವು. ಈವರೆಗೂ ಹಿಜಾಬ್ ಹಾಕಬಾರದು ಎಂದು ಕಾಲೇಜಿನಲ್ಲಿ ಯಾರೂ ಹೇಳಿಲ್ಲ. ಇತರ ವಿದ್ಯಾರ್ಥಿಗಳು ಕೂಡ ಹೇಳಿಲ್ಲ. ಈಗ ಸಡನ್ನಾಗಿ ಇಂಥ ವಾತಾವರಣ ಉಂಟು ಮಾಡಿದ್ದಾರೆ. ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.



ಉಳಿದಂತೆ ಕಳೆದ ವಾರ ಹಿಜಾಬ್ ಗಲಾಟೆ ನಡೆದಿದ್ದ ಉಡುಪಿ, ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಇಂದು ಬಿಸಿ ಸ್ವಲ್ಪ ತಣ್ಣಗಾಗಿದೆ. ಕುಂದಾಪುರದ ಕಾಲೇಜಿನಲ್ಲಿ ಎರಡು ದಿನಗಳ ಹಿಂದೆ ರಂಪ ಮಾಡಿದ್ದ ವಿದ್ಯಾರ್ಥಿನಿಯರು ಕಾಲೇಜಿಗೆ ರಜೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಹೈಕೋರ್ಟಿನಲ್ಲಿ ವಿಚಾರಣೆ ಇರುವುದರಿಂದ ಕಾಲೇಜು ಪ್ರಾಂಶುಪಾಲರೇ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಬರದಂತೆ ಸೂಚಿಸಿದ್ದಾರೆಂಬ ಮಾಹಿತಿಯೂ ಇದೆ.
The Muslim girl students of MGM College here have kept the Hijab controversy alive by refusing to obey the instructions of the principal. The girl students wearing burqas and Hijab entered the college located at Manipal here on Monday February 8. They held a protest inside the college premises and raised slogans asserting that wearing of Hijabs is within their rights.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am