ಬ್ರೇಕಿಂಗ್ ನ್ಯೂಸ್
08-02-22 11:44 am HK Desk news ಕರಾವಳಿ
ಉಡುಪಿ, ಫೆ.8 : ಉಡುಪಿ ಎಂಜಿಎಂ ಕಾಲೇಜು ಆವರಣದಲ್ಲಿ ಕೇಸರಿ ಮತ್ತು ಹಿಜಾಬ್ ಕಿಚ್ಚು ತೀವ್ರಗೊಂಡಿದ್ದು ವಿದ್ಯಾರ್ಥಿಗಳು ಹೈಡ್ರಾಮಾ ನಡೆಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಕೇಸರಿ ತೊಟ್ಟು ಕಾಲೇಜು ಒಳಗೆ ಲಗ್ಗೆ ಇಟ್ಟಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಮುಂದೆಯೇ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿದ್ದಾರೆ.
ಎರಡೂ ಕಡೆಯಿಂದ ವಿದ್ಯಾರ್ಥಿಗಳು ಗುಂಪು ಸೇರಿದ್ದು ಪರಸ್ಪರ ಮಾತಿನ ಚಕಮಕಿ ನಡೆಸಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು, ತಮಗೆ ಹಿಜಾಬ್ ಬೇಕೆಂದು ಘೋಷಣೆ ಕೂಗಿದರೆ, ಹಿಂದು ವಿದ್ಯಾರ್ಥಿಗಳು ವಿರೋಧಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ಹಾಕಿಕೊಂಡು ಕಾಲೇಜು ಒಳನುಗ್ಗಿದ್ದು ಕಾಲೇಜು ಆವರಣದಲ್ಲಿ ಕೇಸರಿ ಕಲರವ ಎದ್ದಿದೆ. ವಿದ್ಯಾರ್ಥಿಗಳು ತಮ್ಮ ಕೇಸರಿ ಶಾಲನ್ನು ಬೀಸಿಕೊಂಡು ಓಡಾಡುತ್ತಿದ್ದು ಕ್ಯಾಂಪಸ್ ಒಳಗೆ ಗಲಾಟೆ ಎದ್ದಿದೆ. ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ನಾಯಕ್ ಮತ್ತು ಇತರ ಸಿಬಂದಿ ಸೇರಿ ವಿದ್ಯಾರ್ಥಿಗಳ ಮನವೊಲಿಕೆ ಮಾಡುತ್ತಿದ್ದಾರೆ.


ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು, ನಾವು ಕಳೆದ ಐದು ವರ್ಷದಿಂದಲೂ ಹಿಜಾಬ್ ಹಾಕಿಯೇ ಬರುತ್ತಿದ್ದೆವು. ಈವರೆಗೂ ಹಿಜಾಬ್ ಹಾಕಬಾರದು ಎಂದು ಕಾಲೇಜಿನಲ್ಲಿ ಯಾರೂ ಹೇಳಿಲ್ಲ. ಇತರ ವಿದ್ಯಾರ್ಥಿಗಳು ಕೂಡ ಹೇಳಿಲ್ಲ. ಈಗ ಸಡನ್ನಾಗಿ ಇಂಥ ವಾತಾವರಣ ಉಂಟು ಮಾಡಿದ್ದಾರೆ. ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.



ಉಳಿದಂತೆ ಕಳೆದ ವಾರ ಹಿಜಾಬ್ ಗಲಾಟೆ ನಡೆದಿದ್ದ ಉಡುಪಿ, ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಇಂದು ಬಿಸಿ ಸ್ವಲ್ಪ ತಣ್ಣಗಾಗಿದೆ. ಕುಂದಾಪುರದ ಕಾಲೇಜಿನಲ್ಲಿ ಎರಡು ದಿನಗಳ ಹಿಂದೆ ರಂಪ ಮಾಡಿದ್ದ ವಿದ್ಯಾರ್ಥಿನಿಯರು ಕಾಲೇಜಿಗೆ ರಜೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಹೈಕೋರ್ಟಿನಲ್ಲಿ ವಿಚಾರಣೆ ಇರುವುದರಿಂದ ಕಾಲೇಜು ಪ್ರಾಂಶುಪಾಲರೇ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಬರದಂತೆ ಸೂಚಿಸಿದ್ದಾರೆಂಬ ಮಾಹಿತಿಯೂ ಇದೆ.
The Muslim girl students of MGM College here have kept the Hijab controversy alive by refusing to obey the instructions of the principal. The girl students wearing burqas and Hijab entered the college located at Manipal here on Monday February 8. They held a protest inside the college premises and raised slogans asserting that wearing of Hijabs is within their rights.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm