ಬ್ರೇಕಿಂಗ್ ನ್ಯೂಸ್
08-02-22 04:47 pm Mangalore Correspondent ಕರಾವಳಿ
ಉಳ್ಳಾಲ, ಫೆ.8 : ದುಬಾಯಿಗೆ ತೆರಳುತ್ತೇನೆಂದು ಸ್ನೇಹಿತರು ಮತ್ತು ಮನೆಯವರಲ್ಲಿ ಹೇಳಿ ಹೊರಟಿದ್ದ ತೊಕ್ಕೊಟ್ಟಿನ ಖ್ಯಾತ ಸಿವಿಲ್ ಆರ್ಕಿಟೆಕ್ಟ್ ಸುರೇಶ್ ಸಾಲ್ಯಾನ್(48) ಸೋಮೇಶ್ವರದ ಕಡಲಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ.
ಸುರೇಶ್ ಅವರು ಸೋಮವಾರ ರಾತ್ರಿ ದುಬೈಗೆ ತೆರಳುತ್ತೇನೆಂದು ಹೇಳಿ ಕೊಲ್ಯದ ತನ್ನ ಮನೆಯಿಂದ ಹೊರಟವರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯ ಕೆಳಗಡೆ ಅವರು ಧರಿಸುತ್ತಿದ್ದ ಚಪ್ಪಲಿ ಪತ್ತೆಯಾಗಿತ್ತು. ಮಧ್ಯಾಹ್ನದ ವೇಳೆ ಸುರೇಶ್ ಮೃತದೇಹ ರುದ್ರಪಾದೆಯ ಸಮೀಪ ಕಡಲ ತೀರಕ್ಕೆ ಅಪ್ಪಳಿಸಿದ್ದು ಕರಾವಳಿ ಕಾವಲು ಪಡೆಯ ಈಜು ರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಸೇರಿ ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಕಳೇಬರವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೂಲತಃ ಕುತ್ತಾರು ತೇವುಳ ನಿವಾಸಿಯಾಗಿದ್ದ ಸುರೇಶ್ ಅವರು ಬಡ ಕುಟುಂಬದವರಾಗಿದ್ದು ಸಿವಿಲ್ ಆರ್ಕಿಟೆಕ್ಟ್ ಆಗಿ ಹಂತ ಹಂತವಾಗಿ ಬೆಳೆದು ತೊಕ್ಕೊಟ್ಟು, ಉಳ್ಳಾಲ ಪರಿಸರದಲ್ಲಿ ಖ್ಯಾತಿಯನ್ನ ಪಡೆದಿದ್ದಲ್ಲದೆ ಸಾಕಷ್ಟು ಸಿರಿವಂತಿಕೆ ಗಳಿಸಿದ್ದರು. ಸಿವಿಲ್ ಕಟ್ಟಡ ಕಾಮಗಾರಿ ಗುತ್ತಿಗೆಯನ್ನೂ ನಿರ್ವಹಿಸುತ್ತಿದ್ದ ಅವರು ಇತ್ತೀಚೆಗೆ ಕೊಲ್ಯದಲ್ಲಿ ನೂತನ ಐಷಾರಾಮಿ ಮನೆಯನ್ನೂ ಕಟ್ಟಿದ್ದರು.
ಅಕ್ರಮ ಸಂಬಂಧಕ್ಕೆ ದುರಂತ ಅಂತ್ಯ...?
ಸುರೇಶ್ ಅವರಿಗೆ ಪತ್ನಿ , ಮಗಳು, ಮಗ ಇದ್ದಾರೆ. ಸುರೇಶ್ ಅವರ ದಾಂಪತ್ಯದಲ್ಲಿ ವಿರಹ ಮೂಡಿದ್ದು ವಿಚ್ಚೇದನಕ್ಕಾಗಿ ಸುರೇಶ್ ಅವರೇ ಕೋರ್ಟ್ ಮೆಟ್ಟಿಲೇರಿದ್ದರು. ಈ ನಡುವೆ ಕೆಲವರ ಮಧ್ಯಸ್ಥಿಕೆಯಿಂದ ಪತಿ- ಪತ್ನಿ ಮತ್ತೆ ಒಂದಾಗಿ ಬಾಳುವ ನಿರ್ಧಾರಕ್ಕೆ ಬಂದಿದ್ದರು. ಇವರದ್ದು ಲವ್ ಮ್ಯಾರೇಜ್ ಆಗಿದ್ದರೂ, ದಂಪತಿ ನಡುವೆ ಕಲಹಕ್ಕೆ ಕಾರಣವಾಗಿದ್ದು ಸುರೇಶ್ ಸಾಲ್ಯಾನ್ ಅಕ್ರಮ ಸಂಬಂಧ. ಎರಡು ಮಕ್ಕಳ ತಾಯಿಯಾಗಿರುವ ಮಹಿಳೆಯ ಜೊತೆ ಕೊಣಾಜೆಯ ಗ್ರಾಮ ಚಾವಡಿ ಎಂಬಲ್ಲಿ ಸುರೇಶ್ ಅಕ್ರಮ ಸಂಬಂಧ ಹೊಂದಿರುವುದು ಪತ್ನಿಗೆ ತಿಳಿದು ಗಲಾಟೆ ಆಗಿತ್ತು.

ಆನಂತರ ಸುರೇಶ್ ವಿಪರೀತ ಖಿನ್ನತೆಗೆ ಒಳಗಾಗಿ ಆರೋಗ್ಯದಲ್ಲೂ ಸೊರಗಿ ಹೋಗಿದ್ದರು. ಸೋಮವಾರ ತೊಕ್ಕೊಟ್ಟಿನ ತನ್ನ ಪ್ಲ್ಯಾನಿಂಗ್ ಪ್ಯಾಲೇಸ್ ಕಚೇರಿಯಲ್ಲಿ ಸ್ನೇಹಿತರು ಮತ್ತು ಪಾಲುದಾರರಲ್ಲಿ ಮಾತನಾಡುತ್ತಿದ್ದ ವೇಳೆ ಮೂರು ತಿಂಗಳ ಮಟ್ಟಿಗೆ ದುಬೈಗೆ ತೆರಳುವುದಾಗಿ ಹೇಳಿದ್ದರು. ರಾತ್ರಿ ತನ್ನ ಕಾರನ್ನ ಕೊಲ್ಯದ ಮನೆಯಲ್ಲಿಟ್ಟು ಪತ್ನಿ ಮತ್ತು ಮಕ್ಕಳಲ್ಲೂ ದುಬೈಗೆ ತೆರಳುತ್ತಿರುವುದಾಗಿ ಹೇಳಿದ್ದರು. ಮಕ್ಕಳು ಕೂಡ ಅಪ್ಪನ ದುಬೈ ತೆರಳುವ ನಿರ್ಧಾರ ಕೇಳಿ ವಿಚಲಿತರಾಗಿದ್ದರು.

ತನ್ನ ಕಾರು ಮತ್ತು ಮೈಯಲ್ಲಿದ್ದ ಒಡವೆಗಳನ್ನ ಮನೆಯಲ್ಲೇ ಬಿಟ್ಟು ತೆರಳಿದ್ದ ಸುರೇಶ್ ಅವರು ಸೋಮವಾರ ರಾತ್ರಿ 12 ರ ನಂತರ ಯಾರ ಸಂಪರ್ಕಕ್ಕೂ ದೊರಕದೆ ನಾಪತ್ತೆಯಾಗಿದ್ದರು. ಇದೀಗ ಶವ ಪತ್ತೆಯಾಗಿದ್ದು ಖ್ಯಾತ ಆರ್ಕಿಟೆಕ್ಟ್ ಆಗಿ ಸಾಕಷ್ಟು ಸಿರಿವಂತಿಕೆಯಿಂದ ಬಾಳಿದ್ದ ಸುರೇಶ್ ದುಬೈ ಹೋಗುವ ನೆಪದಲ್ಲಿ ಕಡಲಿಗೆ ಹಾರಿ ಪ್ರಾಣ ಆಹುತಿ ತೆಗೆದುಕೊಂಡಿದ್ದು ತೊಕ್ಕೊಟ್ಟಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
Mangalore 48-year-old Man body found in Someshwar beach, suicide suspected. The deceased has been identified as Suresh Salian who is a resident of Kuthar and a Architect by profession. He had informed his family members that he was leaving to Dubai.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm