ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am