ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm