ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm