ಬ್ರೇಕಿಂಗ್ ನ್ಯೂಸ್
11-02-22 07:24 pm HK Desk news ಕರಾವಳಿ
ಉಡುಪಿ, ಫೆ.11 : ಹಿಜಾಬ್ ಹೋರಾಟದ ಹಿಂದೆ ಅಂತಾರಾಷ್ಟ್ರೀಯ ಸಂಚು ಅಡಗಿದೆ. ದೊಡ್ಡ ಮಟ್ಟದಲ್ಲಿ ಗಲಭೆ ಎಬ್ಬಿಸಲು ಷಡ್ಯಂತ್ರ ಮಾಡಲಾಗಿತ್ತು. ಹೋರಾಟ ತೀವ್ರಗೊಳಿಸಲು ಮತ್ತು ಇಲ್ಲಿನ ವಿದ್ಯಾರ್ಥಿನಿಯರ ಮೇಲೆ ಪ್ರಭಾವ ಬೀರಲು ಹೊರಗಿನವರು ಉಡುಪಿಗೆ ಬಂದಿದ್ದರು. ಇದಕ್ಕಾಗಿ ಈ ಬಗ್ಗೆ ಸಮಗ್ರ ತನಿಖೆಯಾಗಲು ಎನ್ಐಎಗೆ ಒಪ್ಪಿಸಬೇಕು ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 2021 ರ ನವೆಂಬರ್ ತಿಂಗಳಲ್ಲೇ ಹೋರಾಟದ ರೂಪುರೇಷೆ ನಡೆದಿತ್ತು. ಹೈದರಾಬಾದ್, ಕೇರಳದಿಂದ ತಂಡ ಉಡುಪಿಗೆ ಬಂದು ಇಲ್ಲಿನ ಶಾಂತಿಯ ವಾತಾವರಣ ಕೆಡಿಸಲು ಪ್ಲಾನ್ ಹಾಕಿತ್ತು. ಹೊರ ರಾಜ್ಯಗಳಿಂದ ಟ್ರೈನರ್ಸ್ ಬಂದಿದ್ದಾರೆಂಬ ಮಾಹಿತಿ ಇದೆ. ಹೊರಗಿನಿಂದ ಇಲ್ಲಿಗೆ ಬಂದು ಸಂಚು ನಡೆಸುವ ಉದ್ದೇಶ ಏನಿದೆ. ಉಡುಪಿಯಲ್ಲಿರುವ ಮುಸ್ಲಿಂ ಒಕ್ಕೂಟ ಆಗಲೀ, ಯಾವುದೇ ಮುಸ್ಲಿಂ ವ್ಯಕ್ತಿಯಾಗಲೀ ಈ ಕೆಲಸ ಮಾಡಿದ್ದಲ್ಲ. ಇಲ್ಲಿನ ಮುಸ್ಲಿಮರಲ್ಲಿ ಆ ರೀತಿಯ ಮನಸ್ಥಿತಿ ಇಲ್ಲ.
ಉಡುಪಿ ಜಿಲ್ಲೆಯ ಮುಸ್ಲಿಂ ಮುಖಂಡರಲ್ಲಿ ಮಾತನಾಡಿದ್ದೇನೆ. ಅವರು ನಮ್ಮ ಜೊತೆ ಚೆನ್ನಾಗಿದ್ದಾರೆ. ಆದರೆ ಹಿಜಾಬ್ ವಿವಾದ ಎಬ್ಬಿಸಿದ್ದರ ಹಿಂದೆ ಅಂತಾರಾಷ್ಟ್ರೀಯ ಸಂಚು ಇದೆ. ವಿದ್ಯಾರ್ಥಿನಿಯರು ಹೊರಗೆ ಕೂತ ದಿನವೇ ಇಲ್ಲಿನ ಮಾಧ್ಯಮಗಳಲ್ಲಿ ಬರುವ ಮೊದಲೇ ವಿದೇಶಿ ಮಾಧ್ಯಮದಲ್ಲಿ ಈ ಬಗ್ಗೆ ಸುದ್ದಿಯಾಗುತ್ತದೆ ಅಂದರೆ ನಾವು ಅರ್ಥ ಮಾಡಬೇಕು. ಇದರಲ್ಲಿ ದೇಶ ಒಡೆಯುವ, ದೇಶದ ಘನತೆಗೆ ಕುಂದು ತರುವಂತಹ ಸಂಚು ಇರುವುದು ಕಂಡುಬರುತ್ತದೆ. ಉಡುಪಿಯಲ್ಲಿ ಆರಂಭಗೊಂಡ ವಿವಾದ ಇಡೀ ದೇಶಕ್ಕೆ ವ್ಯಾಪಿಸಿದೆ. ಇದರ ಹಿಂದಿರುವ ಸಂಚನ್ನು ಬಯಲು ಮಾಡಬೇಕು. ಈ ಬಗ್ಗೆ ಗೃಹ ಸಚಿವರಿಗೆ ದೂರು ಕೊಡುತ್ತೇನೆ. ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಟ್ವೀಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಕಾನೂನು ಬಾಹಿರ ಎಂದು ಬರೆದುಕೊಂಡಿದ್ದಾರೆ. ಕ್ಯಾಂಪಸ್ ಫ್ರಂಟ್ ಸಂಘಟನೆ ಈ ವಿದ್ಯಾರ್ಥಿನಿಯರನ್ನು ದಾಳ ಮಾಡಿಕೊಂಡಿದ್ದಾರೆ ಎಂದರು.
ಇಷ್ಟು ದಿನ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಈ ಹೋರಾಟಕ್ಕೆ ಬೆಂಬಲ ನೀಡಿತ್ತು. ಪ್ರಕರಣಕ್ಕೆ ಸಿದ್ದರಾಮಯ್ಯ ಎಂಟ್ರಿಯಾಗುವ ಮೂಲಕ ಕಾಂಗ್ರೆಸ್ ಕೂಡ ಎಂಟ್ರಿಯಾಗಿದೆ. ಈಗ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸುಪ್ರೀಂಕೋರ್ಟಿಗೆ ಹೋಗಿದ್ದಾರೆ. ರಾಜ್ಯದ ಜನಕ್ಕೆ ಕಾಂಗ್ರೆಸಿನ ನಿಲುವು ಏನು ಎಂಬುದು ಗೊತ್ತಾಗಿದೆ. ನಾವು ದೇಶದಲ್ಲಿ ಹಿಜಬ್ ಸಂಪೂರ್ಣ ಬ್ಯಾನ್ ಮಾಡಲು ಮುಂದಾಗಿಲ್ಲ. ನಾವು ತರಗತಿಗೆ ಹಿಜಬ್ ಬೇಡ ಎಂಬುದು ಮಾತ್ರ ನಮ್ಮ ನಿಲುವು. ಆದರೆ ಇವರು ದೇಶದಲ್ಲಿ ದೊಡ್ಡ ರಾದ್ಧಾಂತ ಆಗಿರುವ ರೀತಿ ವರ್ತಿಸುತ್ತಿದ್ದಾರೆ ಎಂದು ರಘುಪತಿ ಭಟ್ ಹೇಳಿದರು.
MLA Raghupati Bhat demanded NIA investigation into the Hijab controversy that originated in the government PU college for girls in the city by six Muslim students. In a statement given to media on Friday February 11, Bhat said, “Even after the high court gave the order, they have approached the Supreme Court. They have utilized the opportunity of appealing in higher court. This is not done by the students themselves. They are supported by Campus Front of India (CFI). We have given these evidences to the department.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm