ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm